ಬಿಸಿ ಬಿಸಿ ಸುದ್ದಿ

ಶಹಾಬಾದ: ಬಿಜೆಪಿ ಎಸ್‍ಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ಶಹಾಬಾದ:ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಚುನಾವಣೆ ವಷಾರ್ಂತಕ್ಕೆ ನಡೆಯಲಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕೆಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಹೇಳಿದರು.

ಅವರು ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಬಿಜೆಪಿ ಎಸ್‍ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿಕೊಂಡು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಯುವ ಮೋರ್ಚಾ ಕಾರ್ಯಕರ್ತರು ಮುಂದಾಗಬೇಕು.ಅಲ್ಲದೇ ಪ್ರತಿಯೊಬ್ಬರೂ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಬೇಕು.ಜನರು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಬಿಜೆಪಿ ದಲಿತರ ಹಾಗೂ ಮುಸ್ಲಿಮರ ವಿರೋಧಿಯಲ್ಲ.ಆದರೆ ಕಾಂಗ್ರೆಸ್ ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ರಾಜಕೀಯ ಲಾಭ ಪಡೆಯುತ್ತಿದೆ.

ಆದರೆ ಅವರ ಆಶಯಗಳಿಗೆ ತಕ್ಕಂತೆ ಎಂದಿಗೂ ನಡೆದುಕೊಂಡಿಲ್ಲ.ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ ಚಿಂತನೆಯನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತಿದ್ದು, ಅಲ್ಪಸಂಖ್ಯಾತರ ದಲಿತರ ಅಭಿವೃದ್ಧಿಗಾಗಿ ಬಿಜೆಪಿ ಪ್ರಯತ್ನಿಸುತ್ತಿದೆ.ಆದ್ದರಿಂದ ಬಿಜೆಪಿಯನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಂಗಬೇಕೆಂದು ಹೇಳಿದರು.

ಈಲ್ಲಾ ಎಸ್‍ಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಿನಾರಾಯಣ ಚಿಮಣಚೂರ,ಶಾಂತವೀರ ಬಡಿಗೇರ, ನಗರ ಎಸ್‍ಸಿ ಮೋರ್ಚಾ ಅಧ್ಯಕ್ಷ ಸಂಜಯ ವಿಠಕರ್, ಮಂಡಲ ಉಪಾಧ್ಯಕ್ಷ ಮಹಾದೇವ ಗೊಬ್ಬೂರಕರ್,ಸದಾನಂದ ಕುಂಬಾರ, ಅಮರ ಕೋರೆ, ಸುಭಾಷ ಕುಸಾಳೆ, ಉಮೇಶ ಪೊಚ್ಚಟ್ಟಿ, ಸಂತೋಷ ಹುಲಿ, ಶಾಮ ಕೋರೆ, ಹಣಮಂತ ಖೇತ್ರೆ, ಶ್ರೀನಿವಾಸ ದೇವಕರ, ರವಿ ಹಳ್ಳಿ, ತಿಪ್ಪಣ್ಣ ಕಣಸೂರ, ಅರುಣ ದೇವಕರ್, ನಾರಾಯಣ ಕಂದಕೂರ ಇತರರು ಇದ್ದರು.

emedialine

Recent Posts

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಝೈನ್ ಗ್ಲೋಬಲ್ (UK) ಲಿಮಿಟೆಡ್ ಜೊತೆಗೆ ಒಪ್ಪಂದ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಝೈನ್ ಗ್ಲೋಬಲ್ UK ಸಂಸ್ಥೆಗಳ ನಡುವೆ ಇಂದು ಸಂಸ್ಥೆಯ ಮುಖ್ಯ ಕಚೇರಿಯಲ್ಲಿ…

5 hours ago

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ ಹಮ್ಮಿಕೊಳ್ಳಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ…

7 hours ago

ಸೇಡಂನಲ್ಲಿ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರ ಉದ್ಘಾಟನೆ

ಸೋಮವಾರದಿಂದ ಹೆಸರು ಖರೀದಿ ಕೇಂದ್ರ ಆರಂಭ: ಡಾ.ಶರಣಪ್ರಕಾಶ ಪಾಟೀಲ ಕಲಬುರಗಿ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಹೆಸರು ಖರೀದಿಸಲು ಸರ್ಕಾರ…

9 hours ago

ಬುಡಕಟ್ಟು ಜನರು ಮೂಲ ಜಾನಪದ ಕಲಾವಿದರು

ಕಲಬುರಗಿ ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ಕಲಬುರಗಿ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಜಾಫರಬಾದ ವತಿಯಿಂದ “ವಿಶ್ವ…

9 hours ago

ಕಲಬುರಗಿ: ಫರಸಿ ತುಂಬಿದ ಲಾರಿ ಪಲ್ಟಿ: ಹಲವರಿಗೆ ಗಾಯ

ಕಲಬುರಗಿ: 11ಕ್ಕೂ ಹೆಚ್ಚು ಜನ ಕಾರ್ಮಿಕರು ಮತ್ತು ಪರಸಿ ತುಂಬಿದ ಲಾರಿಯೊಂದು ಉರುಳಿಬಿದ್ದು ಹಲವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಂಚೋಳಿ…

10 hours ago

ವಾಡಿ: ಶ್ರಾವಣ ಶನಿವಾರದ ಪ್ರಯುಕ್ತ ಪ್ರಸಾದ ಸಂತರ್ಪಣೆ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ವಿರುವ ಶಕ್ತಿ ಆಂಜನೇಯ ದೇವಸ್ಥಾನ ದಲ್ಲಿ ಮೂರನೇ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ವಡೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420