ಬಿಸಿ ಬಿಸಿ ಸುದ್ದಿ

ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ : ತಾಲೂಕಿನ ಪಾಣೇಗಾಂವ ಗ್ರಾಮದ ಶಿವಾಜಿ ತಾಂಡಾದಲ್ಲಿ ಸಂತ ಸೇವಾಲಾಲ್ ಕಮಿಟಿ ಹಾಗೂ ಗೋರ್ ಸೇನಾ ಗೋರ್ಸಿಕ್ವಾಡಿಯ ವೇದಿಕೆ ನೇತೃತ್ವದಲ್ಲಿ ಕಮಾಂಡೋ, ಸಂಜೀವ ಪವಾರ,ವೀಣಾ ಎಸ್. ಪವಾರ ದಂಪತಿಯ ಮಕ್ಕಳಾದ ವಿಘೇಶ,ರಿತ್ವಿಕಾ 8ನೇ ಹುಟ್ಟು ಹಬ್ಬ ಅಂಗವಾಗಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿರುವ ಮಕ್ಕಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದೇ ವೇಳೆ ಗ್ರಾಮದ 39 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ನೋಟಬುಕ್ ಮತ್ತು ಪೆನ್ ವಿತರಣಾ ಕಾರ್ಯಕ್ರಮ ಮಾಡಿ ಪ್ರೋತ್ಸಾಹ ನೀಡ ಲಾಯಿತು.

ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಖಣದಾಳ ಗ್ರಾ. ಪಂ. ಉಪಾಧ್ಯಕ್ಷ ಕಾಂತು ಚವಾಣ, ಮಾತನಾಡಿ, ಗ್ರಾಮದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪಾಸಾಗಿ ಗ್ರಾಮದ ಗೌರವ,ಕೀರ್ತಿ ಹೆಚ್ಚಿಸಿದ್ದಾರೆ. ಪಾಲಕರಲ್ಲಿ ವಿದ್ಯಾರ್ಥಿಗಳ ಬಗ್ಗೆ ಪ್ರೀತಿ, ಆತ್ಮವಿಶ್ವಾಸ ಮೂಡಿದೆ ಎಂದರು. ಮುಂದೆ ಕೂಡಾ ಇದೇ ರೀತಿ ವಿದ್ಯಾಭ್ಯಾಸ ಮಾಡಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ದಿವ್ಯ ಸಾನಿಧ್ಯ ವಹಿಸಿ ಶ್ರೀ ಶಂಕರ್ ಮಹಾರಾಜ್, ಮಾತನಾಡಿ ವಿದ್ಯಾರ್ಥಿ ಜೀವನ ಅಂದ್ರೆ ಬಂಗಾರ ಜೀವನ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಚೆನ್ನಾಗಿ ಓದಿ ಬದುಕು ಕಟ್ಟಿಕೊಳ್ಳಲು ಶ್ರಮ ಪಡಬೇಕು ಎಂದು ಆಶೀರ್ವಾದ ಮಾಡಿದರು.

ಗ್ರಾ. ಪಂ. ಸದಸ್ಯ ನಾಗೇಶ್ ಮಚಖೇಡ ಮಾತಾನಾಡಿ, ಕಮಾಂಡೋ ಸಂಜೀವ ಪವಾರ್ ಹಾಗೂ ಪತ್ನಿ ವೀಣಾ ಎಸ್ ಪವಾರ ದಂಪತಿ ಮಾಡುತ್ತಿರುವ ಕೆಲಸ ಅತ್ಯಂತ ಅದ್ಭುತವಾಗಿದೆ. ದೇಶದ ಗಡಿಯಲ್ಲಿ ಕರ್ತವ್ಯದಲ್ಲಿದ್ದರರೂ ಸಹ ಅವರ ಮಕ್ಕಳ ಹುಟ್ಟು ಹಬ್ಬ ಸಾಮಾನ್ಯ ವಾಗಿ ಅದ್ದೂರಿ ಆಚರಣೆ ಮಾಡುವ ಬದಲು ಜನ್ಮದಿನದ ನಿಮಿತ್ಯ ವಿಶೇಷ ವಾಗಿ ಗ್ರಾಮದ ಎಸ್ಎಸ್ಎಲ್ಸಿ ಪಾಸಾದ 39 ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್, ಪೆನ್, ಪಠ್ಯ ಪುಸ್ತಕ ವಿತರಣೆ ಹಾಗೂ ಸನ್ಮಾನ ಮಾಡಿ ಮಾದರಿಯಾಗಿದ್ದಾರೆ ಎಂದರು.

ವೇದಿಕೆ ಮೇಲೆ ಉಪಸ್ಥಿತರಿದ್ದ ಗ್ರಾ.ಪಂ. ಸದಸ್ಯರಾದ ಶಂಕರ್ ಕಾರಭಾರಿ, ಕಿಶನ್ ರಾಠೋಡ, ಮೊಹಮ್ಮದ್ ಹುಸೇನ್ ಸಾಬ್, ಹಾಗೂ ವೀಣಾ ಎಸ್. ಪವಾರ ಇವರು ಬಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ನು, ಪುಸ್ತಕ ನೀಡಿ ಸನ್ಮಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಶಿವರಾಮ ಚವಾಣ, ಕುಪ್ಪಣ್ಣ ರಾಠೋಡ, ವೆಂಕಟ ಪವಾರ, ಹರಿಶ್ಚಂದ್ರ ಜಾಧವ, ಎಮನಾಥ ರಾಠೋಡ, ಮೊಹಮ್ಮದ್ ನಾಸೀರ, ದಾಮಲು ಪವಾರ ಹಾಗೂ ಜೀತಾಲಾಲ್ ರಾಠೋಡ, ಶ್ರೀಮತಿ ವೀಣಾ ಸಂಜೀವ ಪವಾರ ಸೇರಿದಂತೆ ಹಲವರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

8 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

9 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

9 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

10 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

10 hours ago