ಮುನೀರ್‍ಬೊಮ್ಮನಹಳ್ಳಿ ಶಾಲೆಯಲ್ಲಿ ಅಕ್ರಮವಾಗಿ ವಾಸವಿರುವವರ ತೆರವುಗೊಳಿಸಿ: ದಲಿತ ಸೇನೆ

ಸುರಪುರ: ತಾಲೂಕಿನ ಮುನೀರ್‍ಬೊಮ್ಮನಹಳ್ಳಿ ಗ್ರಾಮದಲ್ಲಿರುವ ಹಳೆಯ ಸರಕಾರಿ ಶಾಲಾ ಕಟ್ಟಡದಲ್ಲಿ ಅಕ್ರಮವಾಗಿ ವಾಸವಿರುವವರ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆಯಿಂದ ನಗರದ ತಹಸೀಲ್ ಕಚೇರಿ ಮುಂದೆ ಧರಣಿ ನಡೆಸಲಾಯಿತು.

ಮಂಗಳವಾರ ಬೆಳಿಗ್ಗೆಯಿಂದ ಧರಣಿ ಆರಂಭಿಸಿದ ಮುಖಂಡರು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅನೇಕ ಮುಖಂಡರು,ಮುನೀರ್‍ಬೊಮ್ಮನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕಾರ್ಯಕರ್ತೆ ಹಾಗು ಇವರ ಪತಿಯಾಗಿರುವ ಕಾಚಾಪೂರ ಸರಿಕಾರಿ ಶಾಲೆಯ ಶಿಕ್ಷಕರು ಇವರು ತಮ್ಮ ಕುಟುಂಬವನ್ನು ಮುನೀರ್ ಬೊಮ್ಮನಹಳ್ಳಿಯಲ್ಲಿರುವ ಹಳೆಯ ಸರಕಾರಿ ಶಾಲೆಯಲ್ಲಿದ್ದು ಸರಕಾರಿ ಕಟ್ಟಡವನ್ನು ಅಕ್ರಮವಾಗಿ ಉಪಯೋಗಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಅಂಗನವಾಡಿ ಕಟ್ಟಡದಲ್ಲಿ ವಾಸವಿದ್ದರು,ಸರಕಾರಿ ಶಾಲೆಯಲ್ಲಿ ತಮ್ಮ ವಸ್ತುಗಳನ್ನು ಇಟ್ಟುಕೊಳ್ಳಲು ಉಪಯೋಗಿಸುತ್ತಿದ್ದರು,ಈಗ ಅಂಗನವಾಡಿ ಕಟ್ಟಡ ಕೆಡವಿರುವುದರಿಂದ ಸರಕಾರಿ ಶಾಲಾ ಕಟ್ಟಡದಲ್ಲಿಯೆ ವಾಸಿಸುತ್ತಿದ್ದಾರೆ.ಆದ್ದರಿಂದ ಅಕ್ರಮವಾಗಿ ಸರಕಾರಿ ಕಟ್ಟಡ ಉಪಯೋಗಿಸುತ್ತಿರುವ ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಾಯಂಕಾಲದವರೆಗೆ ನಡೆದ ಧರಣಿ ಸ್ಥಳಕ್ಕೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ ಮತ್ತು ಸಿಡಿಪಿಒ ಲಾಲಸಾಬ್ ಪೀರಾಪುರ ಅವರೊಂದಿಗೆ ಆಗಮಿಸಿ ಧರಣಿ ನಿರತರ ಮನವಿಯನ್ನು ಆಲಿಸಿದರು.ನಂತರ ಒಂದು ವಾರದೊಳಗೆ ಕಟ್ಟಡದಲ್ಲಿರುವವರನ್ನು ತೆರವುಗೊಳಿಸುವುದಾಗಿ ಲಿಖಿತ ಭರವಸೆ ನೀಡಿದ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಧರಣಿಯನ್ನು ನಿಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸೇನೆಯ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ,ಉಪಾಧ್ಯಕ್ಷ ಹಣಮಂತ ಕಟ್ಟಿಮನಿ, ತಾಲೂಕು ಅಧ್ಯಕ್ಷ ನಿಂಗಣ್ಣ ಗೋನಾಲ, ಹುಲಗಪ್ಪ ದೇವತ್ಕಲ್,ಮಾನಪ್ಪ ಝಂಡದಕೇರಾ,ತಾಯಪ್ಪ ಕನ್ನೆಳ್ಳಿ,ಭೀಮಣ್ಣ ಹೆಬ್ಬಾಳ,ಬನ್ನಪ್ಪ ಕೋನ್ಹಾಳ,ಶಿವಣ್ಣ ನಾಗರಾಳ,ನಾಗರಾಜ ಗೋಗಿಕೇರಾ,ಗೋಪಾಲ ರಾಯಚೂರ್,ಪ್ರಕಾಶ ಕೆಂಭಾವಿ,ಮೌನೇಶ ಹುಣಸಿಹೊಳೆ,ರಾಹುಲ್ ನಾಟೆಕಾರ್,ಸದಾಶಿವ ಬೊಮ್ಮನಹಳ್ಳಿ,ಮೌನೇಶ ಚಿಂಚೋಳಿ,ಸುಭಾಸ ತೇಲ್ಕರ್,ರವಿ ಬೊಮ್ಮನಹಳ್ಳಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

28 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

38 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

40 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

46 mins ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

47 mins ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

52 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420