ವಿವಿಧ ಗ್ರಾಮಗಳಲ್ಲಿ ಅಭೀವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜುಗೌಡ ಅಡಿಗಲ್ಲು

0
9

ಸುರಪುರ: ತಾಲೂಕಿನ ಕೋನಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಸಿಸಿ ರಸ್ತೆ ಸೇರಿದಂತೆ ವಿವಿಧ ಅಭೀವೃಧ್ಧಿ ಕಾಮಗಾರಿಗಳಿಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಗುದ್ದಲಿ ಪೂಜೆ ನೆರವೇರಿಸಿದರು.

ಕೋನಾಳ ಗ್ರಾಮದಲ್ಲಿ ಸೋಮವಾರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಲಜೀವನ ಮೀಷನಡಿಯಲ್ಲಿ ನಾಗರಾಳ,ದೇವತ್ಕಲ್, ಹಾಲಬಾವಿ, ಚನ್ನಪಟ್ಟಣದಲ್ಲಿ ಸುಮಾರು 2 ಕೋಟಿಗೂ ಅಧಿಕ ವೆಚ್ಚದಲ್ಲಿ ಕುಡಿಯುವ ನೀರನ್ನು ಒದಿಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಅದೇರಿತಿಯಾಗಿ ಕೆಕೆಆರ್‍ಡಿಬಿ ಅನುದಾನದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಶಾಲಾ ಕೋಠಡಿ, ಸಿಸಿರಸ್ತೆ, ಒಳಚರಂಡಿಗಳು ಮತ್ತು ಯಾತ್ರಿ ನಿವಾಸಗಳ ಕಾಮಗಾರಿಗಳ ಯೋಜನೆಯನ್ನು ರೂಪಿಸಲಾಗಿದೆ ಎಂದರು.

Contact Your\'s Advertisement; 9902492681

ಕಾಮಗಾರಿಗಳ ಗುತ್ತಿಗೆಪಡೆದವರು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಬೇಕು,ಜೊತೆಗೆ ಅಧಿಕಾರಿಗಳು ಕಾಮಗಾರಿಗಳನ್ನು ನಿಗಾವಹಿಸಿ ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ(ತಾತಾ), ಯಲ್ಲಪ್ಪ ಕುರುಕುಂದಿ ಜಿಪಂ ಸದಸ್ಯ ಬಸವರಾಜ ಸ್ಥಾವರ ಮಠ, ಮುಖಂಡರಾದ ಹಚ್.ಸಿ.ಪಾಟೀಲ, ಸಿದ್ದನಗೌಡ ಕರಿಬಾವಿ, ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮೇಲಪ್ಪ ಗುಳಗಿ, ಶಾಂತಗೌಡ ಚನ್ನಪಟಣ ಲೊಕೋಪಯೋಗಿ ಎಈಈ ಎಸ್.ಜಿ.ಪಾಟೀಲ್, ಗ್ರಾಮೀಣ ನೀರು ಸರಬರಾಜು ನಿಗಮದ ಎಈಈ ಹಣಮಂತಪ್ಪ ಅಂಬ್ಲಿ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here