ಇದು ಬಿಜೆಪಿಯವರ ತೀರ್ಥಯಾತ್ರೆ: ಡಾ. ಅಜಯ್ ಸಿಂಗ್ ಲೇವಡಿ

ಕಲಬುರಗಿ:ಮೋದಿ ಸಂಪುಟದ ಸಚಿವರ ಜನಾಶಿರ್ವಾದ ಯಾತ್ರೆಯನ್ನು ತೀರ್ಥಯಾತ್ರೆ ಎಂದು ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಟೀಕಿಸಿದ್ದಾರೆ.

ಜನ ಇವರನ್ನೆಲ್ಲ ಆಯ್ಕೆ ಮಾಡಿ ಕಳುಹಿಸಿ 2 ವರ್ಷಗಳೇ ಗತಿಸಿವೆ. ಈಗೇನು ಜನಾಶಿರ್ವಾದ ಪಡೆಯೋದಿದೆ? ಜನರ ಆಶಿರ್ವಾದದಿಂದ ಆಯ್ಕೆಯಾಗಿ ಹೋದವರು ಇವರೆಲ್ಲರೂ 2 ವರ್ಷದಲ್ಲಿ ಅದೇನು ಜನಪರ ಪ್ರಗತಿಪರ ಕೆಲಸಗಳನ್ನು ಮಾಡಿz್ದÉೀವೆ ಎಂಬುದರ ಮಾಹಿತಿ ನೀಡುವ ಕಾಲವಿದು. ಈ ಕಾಲದಲ್ಲಿ ಆಶಿರ್ವಾದ ಮಾಡಿರೆಂದು ಬಂದರೆ ಇವರಿಗೆ ಏನನ್ನಬೇಕು? ಜನರ ಆಶಿರ್ವಾದ ತಮಗೆ ತೋಚಿದಂತೆ ಬಳಸುತ್ತಿರುವ ಬಿಜೆಪಿಗರಿಗೆ ರಾಜ್ಯದ ಜನತೆ ಕ್ಷಮಿಸೋದಿಲ್ಲವೆಂದು ಅವರು ಹೇಳಿದ್ದಾರೆ.

ಕಲ್ಯಾಣ ನಾಡಾದ ಬೀದರ್‍ನಿಂದ ಶುರುವಾಗಿರುವ ಜನಾಶಿರ್ವಾದ ಯಾತ್ರೆಯುದ್ದಕ್ಕೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿಯಲ್ಲಿ ರಾತ್ರಿ ಕಫ್ರ್ಯೂ ಜಾರಿಯಲ್ಲಿದ್ದರೂ ರಾತ್ರಿ 10. 30 ರ ವರೆಗೂ ಸಭೆ ಮಾಡಿದ್ದಾರೆ. ಕೇಂದ್ರ ಸಚಿವರು, ಶಾಸಕರು ಇವರೆಲ್ಲರ ವಿರುದ್ಧ ಜಿಲ್ಲಾಡಳಿತ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.

ಜನಾಶಿರ್ವಾದ ಪಡೆದು ಕಲ್ಯಾಣ ನಾಡಲ್ಲಿ ಕಲಬುರಗಿ, ಬೀದರ್ ಸೇರಿದಂತೆ 5 ಸ್ಥಾನಗಳಲ್ಲಿ ಬಿಜೆಪಿ ಗೆದ್ದರೂ ಇಲ್ಲಿಗೆ ಬರಬೇಕಾಗಿದ್ದಂತಹ ರೇಲ್ವೆ ವಿಭಾಗೀಯ ಕಚೇರಿ, ಸಿಪೆಟ್ ಕಚೇರಿ ಸೇರಿದಂತೆ 8 ಕ್ಕೂ ಹೆಚ್ಚು ಪ್ರಗತಿಪರ ಯೋಜನೆಗಳು ತರಲಾಗಿಲ್ಲ. ಇಲ್ಲಿ ಮಂಜೂರಾದಂತಹ ಇವೆಲ್ಲ ಯೋಜನೆಗಳು ಕೈಬಿಟ್ಟು ಹೋದರೂ ಇವರಿಗೆ ಪರಿವೇ ಇಲ್ಲದವರಂತೆ ಇದ್ದಾರೆ. ಇದೀಗ ಮತ್ತೆ ಜನಾಶಿರ್ವಾದ ಎಂದು ಬರುತ್ತಿದ್ದಾರೆ. ಇದು ಜನಾಶಿರ್ವಾದವಲ್ಲ, ಕೊನೆ ಮುಖ ತೋರಿಸಿ ಹೋಗುತ್ತಿz್ದÉೀವೆ ತೀರ್ಥಯಾತ್ರೆಗೆ ಎಂದು ಹೇಳುವಂತಿದೆ ಬಿಜೆಪಿಯವರ ಈ ಯಾತ್ರೆ ಎಂದು ಡಾ. ಅಜಯ್ ಸಿಂಗ್ ಲೇವಡಿ ಮಾಡಿದ್ದಾರೆ.

ಬೀದರ್ ಸಂಸದರು, ಈಗ ಕೇಂದ್ರ ಸಚಿವರಾಗಿರುವ ಭಗವಂತ ಖೂಬಾ ಯಾತ್ರೆಯುದ್ದಕ್ಕೂ ಗುಡಿ ಗುಂಡಾರ ಸುತ್ತುತ್ತಿದ್ದಾರೆ. ಕಲ್ಯಾಣದ ಬಿಜೆಪಿ ಶಾಸಕರುಗಳು ಇವರಿಗೆ ಸಾಥ್ ನೀಡುತ್ತಿದ್ದಾರೆ. ದಾರಿಯಲ್ಲೆಲ್ಲಾ ಮಠಗಳಿಗೆ – ಮಂದಿರಗಳಿಗೆ ಹೋಗಿ ಬರುತ್ತಿದ್ದಾರೆ. ಹೀಗಾಗಿ ಇದು ಅಕ್ಷರಶಃ ಬಿಜೆಪಿಯವರ ತೀರ್ಥಯಾತ್ರೆಯಂತೆಯೇ ಕಂಗೊಳಿಸುತ್ತಿದೆ, ಡಬಲ್ ಇಂಜಿನ್ ಸರಕಾರ ಈಗಲೇ ಕಲ್ಯಾಣಕ್ಕೆ ದೋಖಾ ಮಾಡಿದೆ. ಬಿಜೆಪಿಯವರಿಗೆ ತಕ್ಕಪಾಠ ಕಲಿಸಲು ಜನ ಸಿದ್ಧರಾಗಿರುವಾಗಲೇ ಈ ತೀರ್ಥ ಯಾತ್ರೆ ಹೊರಟಿದೆ ಎಂದು ಡಾ. ಅಜಯ್ ಸಿಂಗ್ ಕುಟುಕಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420