ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರೋಧಿಸಿ ಎಐಡಿವಾಯ್‍ಓ ಪ್ರತಿಭಟನೆ

ಶಹಾಬಾದ: ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಉದ್ಯೋಗಕ್ಕಾಗಿ ಪ್ರತಿಭಟನೆ ನಡೆಸಿದ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರೋಧಿಸಿ ಮತ್ತು ಬಂಧಿತ ಪ್ರತಿಭಟನಾ ನಿರತರನ್ನು ಬಿಡುಗಡೆಗೆ ಒತ್ತಾಯಿಸಿ ನಗರದ ಎಐಡಿವಾಯ್‍ಓ ಸಂಘಟನೆ ಗುರುವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರು ಮಾತನಾಡಿ, ಮಧ್ಯಪ್ರದೇಶದಲ್ಲಿ, ನಿರುದ್ಯೋಗ ವಿರೋಧಿ ಹೋರಾಟ ಸಮಿತಿ ಮತ್ತು ಎಐಡಿವೈಒ ಸಂಘಟನೆಗಳು ಕಳೆದ ಹಲವು ವರ್ಷಗಳಿಂದ ಉದ್ಯೋಗಕ್ಕಾಗಿ ಚಳುವಳಿಯನ್ನು ಬೆಳೆಸುತ್ತಿವೆ. ಅದರ ಒಂದು ಭಾಗವಾಗಿ, ಭೋಪಾಲ್‍ನ ರೋಷನ್‍ಪುರ ಜಂಕ್ಷನ್‍ನಲ್ಲಿ ನಿನ್ನೆದಿನ ರಾಜ್ಯ ಮಟ್ಟದ ಪ್ರತಿಭಟನಾ ಪ್ರದರ್ಶನವನ್ನು ಸಂಘಟಿಸಲಾಗಿತ್ತು. ಪ್ರತಿಭಟನಾನಿರತರ ಮೇಲೆ ಅಲ್ಲಿನ ಪೊಲೀಸರು ಅನಾಗರಿಕವಾಗಿ ಕ್ರೂರ ಲಾಠಿ ಚಾರ್ಜ್ ಮಾಡಿದ್ದಾರೆ.

ಎಐಡಿವೈಒನ ರಾಜ್ಯಾಧ್ಯಕ್ಷರಾದ ಲೋಕೇಶ್ ಶರ್ಮಾ ಮತ್ತು ಉಪಾಧ್ಯಕ್ಷರಾದ ವಿಜಯ್ ಶರ್ಮಾ ಮತ್ತು ನಿರುದ್ಯೋಗ ವಿರೋಧಿ ಹೋರಾಟ ಸಮಿತಿಯ ಕಾರ್ಯದರ್ಶಿ ಶ್ರೀ ಪ್ರಮೋದ್ ನಾಮದೇವ್ ಅವರನ್ನು ಥಳಿಸಿ ಬಂಧಿಸಲಾಗಿದೆ. ಗೋಪಾಲ್ ಪ್ರಜಾಪತಿ, ದಿನೇಶ್ ಠಾಕೂರ್, ಪಾರುಲ್ ಶರ್ಮಾ, ಮನೋಜ್ ರಜಕ್, ಆರತಿ ಶರ್ಮಾ ಮತ್ತಿತರರನ್ನು ಬಂಧಿಸಿದ್ದಾರೆ.

ಸಲೀಂ ಖಾನ್ ಸೇರಿದಂತೆ ನೂರಾರು ಯುವಕರು ಲಾಠಿಚಾರ್ಜ್‍ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಯುವಕರು ಗಾಯಗೊಂಡಿದ್ದಾರೆ. ಬಂಧಿತರನ್ನು ದಿನವಿಡೀ ಅಲೆದಾಡಿಸಿ ನಗರದಿಂದ 30-40 ಕಿಲೋಮೀಟರ್ ದೂರಕ್ಕೆ ಕರೆದೊಯ್ಯಲಾಗಿದೆ. ಅನೇಕ ಬಂಧಿತ ಯುವಕರನ್ನು ಇಡೀ ದಿನ ಭೋಪಾಲ್‍ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೂರಿಸಲಾಗಿದೆ. ಅವರಲ್ಲಿ ಕೆಲವರ ಮೇಲೆ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಲಾಗಿದೆ. ಪೊಲೀಸರ ಈ ದೌರ್ಜನ್ಯವು ರಾಜ್ಯ ಮತ್ತು ದೇಶದ ಎಲ್ಲ ಯುವಕರಲ್ಲಿ ಸಾಕಷ್ಟು ಆಕ್ರೋಶವನ್ನುಂಟುಮಾಡಿದೆ.

ಮಧ್ಯಪ್ರದೇಶದಲ್ಲಿ ಕಳೆದ 4 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ. ಕೆಲವು ನೇಮಕಾತಿ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಿದ ನಂತರವೂ ಅವರಿಗೆ ನೇಮಕಾತಿ ಆದೇಶವನ್ನು ನೀಡಿಲ್ಲ. ಅವರಲ್ಲಿ ಹಲವರು ಇನ್ನು ಕೆಲವೇ ದಿನಗಳಲ್ಲಿ ತಮ್ಮ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ನಿರುದ್ಯೋಗ ವಿರೋಧಿ ಹೋರಾಟ ಸಮಿತಿ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೇಸೇಷನ್ ನೇತೃತ್ವದಲ್ಲಿ, ಇಡೀ ರಾಜ್ಯದ ಯುವಜನರು ನಿನ್ನೆ ಭೋಪಾಲ್‍ನಲ್ಲಿ ರಾಜ್ಯ ಮಟ್ಟದ ಪ್ರತಿಭಟನಾ ಪ್ರದರ್ಶನವನ್ನು ಸಂಘಟಿಸಿದ್ದರು.

ಮೆರವಣಿಗೆ ಸಾಗುತ್ತಿರುವಾಗ, ಪೊಲೀಸರು ಅವರ ಮೇಲೆ ಅನಾಗರಿಕವಾಗಿ ಲಾಠಿ ಪ್ರಹಾರ ನಡೆಸಿದರು. ಆದ್ದರಿಂದ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಮತ್ತು ಂIಆಙಔ ಸಂಘಟನೆಯ ವತಿಯಿಂದ ಪೊಲೀಸರ ಈ ಹೇಯ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತಾ, ಇಂದು ಆಗಸ್ಟ್ 19, 2021ರಂದು ದೇಶದಾದ್ಯಂತ ಅನೇಕ ಜಿಲ್ಲೆಗಳಲ್ಲಿ ಈ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ಲಾಠಿ ಚಾರ್ಜ್‍ನಲ್ಲಿ ಗಾಯಗೊಂಡ, ನಿರುದ್ಯೋಗ ವಿರೋಧಿ ಹೋರಾಟ ಸಮಿತಿ ಮತ್ತು ಎಐಡಿವೈಒನ ಎಲ್ಲ ಯುವಕರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು ಮತ್ತು ಬಂಧಿತ ಯುವಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಲು ತಾವು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಐಡಿವಾಯ್‍ಓ ಅಧ್ಯಕ್ಷ ಸಿದ್ದು ಚೌಧರಿ,ಕಾರ್ಯದರ್ಶಿ ಪ್ರವೀಣ ಬಣವೀಕರ್, ತಿಮ್ಮಯ್ಯ ಮಾನೆ ,ನೀಲಕಂಠ ಎಮ್ ಹುಲಿ , ಹಣಮಂತ ಟೈಗರ, ಭಾಗವಹಿಸಿದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

13 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420