ಕಲಬುರಗಿ: ಜಿಲ್ಲೆಯಲ್ಲಿ ಯಡ್ರಾಮಿ ತಾಲೂಕಿನ ಆಲೂರು ಗ್ರಾಮದ ನಿವಾಸಿ ಸುಭದ್ರಬಾಯಿ ಗಂಡ.ದಿ. ಮಲ್ಲಪ್ಪ ಸಾಹು(94)ಅವರು ಶುಕ್ರವಾರ ಮಧ್ಯಾಹ್ನ ನಿಧನರಾದರು.
ಮೃತರು ಐವರು ಪುತ್ರರು, 6ಜನ ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿ. 21ರಂದು ಶನಿವಾರ ಅಪರಾಹ್ನ 1 ಗಂಟೆಗೆ ಸ್ವಂತ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ಶಾಸಕ ಡಾ.ಅಜಯಸಿಂಗ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ, ಮಾಜಿ ಜಿಪಂ ಸದಸ್ಯೆ ಶೋಭಾ ಬಾಣಿ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.