ಚಿಂಚೋಳಿ: ಇಲ್ಲಿನ ಬಿಜೆಪಿ ಇತರೆ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ಮಂಡಲ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಮರಗುತ್ತಿ ನೇಮಕ ಮಾಡಿ ಪಕ್ಷದ ಮುಖಂಡರು ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಡಾ. ಅವಿನಾಶ್ ಜಾಧವ್, ಜಿಲ್ಲಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೆವಾಡಗಿ, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಮ್ಮೆಗನೂರ್ ಅವರ ಆದೇಶದಂತೆ ಚಿಂಚೋಳಿ ಮಂಡಲ್ ಅಧ್ಯಕ್ಷರಾದ ಸಂತೋಷ ಗಡಂತಿ ಇಂದು ಪಕ್ಷದ ಹಿರಿಯರ ಸಮ್ಮುಖದಲ್ಲಿ ಇತರೆ ಹಿಂದುಳಿದ ವರ್ಗಗಳ (ಓಬಿಸಿ )ಮೋರ್ಚಾ ಚಿಂಚೋಳಿ ಮಂಡಲ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮಲ್ಲು ಮರಗುತ್ತಿ ತಿಳಿಸಿದ್ದಾರೆ.
ನನ್ನ ನೇಮಕಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಬಿಜೆಪಿ ಪಕ್ಷದ ಎಲ್ಲ ನಾಯಕರಿಗೆ ಹೃದಯದ ತುಂಬಿ ಅಭಿನಂದಿಸಿ, ಮುಂದಿನ ದಿನಗಳಲ್ಲಿ ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಪಕ್ಷದ ಎಲ್ಲಾ ಮುಖಂಡರ ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.