ಹೊಸಪೇಟೆ(ವಿಜಯನಗರ): ನಮ್ಮ ಪುರಾತನ ಸಂಸ್ಕøತಿ, ಶ್ರೀಮಂತ ಪರಂಪರೆ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸಲು ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯ ಮತ್ತು ಶ್ರೀಕೃಷ್ಣದೇವರಾಯ ಹಾಗೂ ಅವರ ಆಡಳಿತದ ಶೈಲಿ ಪಠ್ಯಕ್ರಮದ ಭಾಗವಾಗಬೇಕು ಮತ್ತು ಇದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ಶ್ರೀಕೃಷ್ಣದೇವರಾಯ ಮತ್ತು ಈ ಸಾಮ್ರಾಜ್ಯದ ಬಗ್ಗೆ ಬಗ್ಗೆ ಇತಿಹಾಸಕಾರರು ಹೆಚ್ಚಿನ ಒತ್ತು ನೀಡಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಹೇಳಿದರು.
ಹಂಪಿಯ ವಿಶ್ವಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿದರ ನಂತರ ಅವರು ವಿಜಯ ವಿಠ್ಠಲ ಮಂದಿರ ಆವರಣದಲ್ಲಿರುವ ಕಲ್ಲಿನ ರಥದ ಎದುರುಗಡೆ ಅವರು ಮಾತನಾಡಿದರು.
ಶ್ರೀ ಕೃಷ್ಣ ದೇವರಾಯ ಕೇವಲ ಓರ್ವ ರಾಜನಾಗಿರದೇ ಅವರು ಪ್ರಜೆಗಳನ್ನು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಿದ್ದ ಸಂಸ್ಕøತಿ,ಸಂಗೀತ,ಶಿಕ್ಷಣ ಮತ್ತು ಉತ್ತಮ ಆಡಳಿತಕ್ಕೆ ಒತ್ತು ನೀಡಿದ್ದ ಎಂದು ಹೇಳಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ದೇಶದ ಯುವಪೀಳಿಗೆ ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಗೆ ಭೇಟಿ ನೀಡಬೇಕು; ಈ ಮೂಲಕ ಗತವೈಭವದಿ ಮೆರೆದ ನಮ್ಮ ಶ್ರೀಮಂತ ಸಾಮ್ರಾಜ್ಯ ಮತ್ತು ಸುಂದರ ವಾಸ್ತುಶಿಲ್ಪಶೈಲಿಯ ಬಗ್ಗೆ ಹೆಮ್ಮೆ ಪಡುವ ಮತ್ತು ತಿಳಿದುಕೊಳ್ಳುವ ಕೆಲಸ ಮಾಡಬೇಕು ಎಂದರು.
ಹಂಪಿ ಹಾಗೂ ಸುತ್ತಮುತ್ತಲಿನ ಸ್ಮಾರಕಗಳು ಸಂರಕ್ಷಿಸುವುದಕ್ಕೆ ಸಾರ್ವಜನಿಕರು ಕೈಜೋಡಿಸಬೇಕು; ಅದರಲ್ಲೂ ವಿಶೇಷವಾಗಿ ಈ ಭಾಗದ ಜನರು ಸ್ಮಾರಕಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಎಎಎಸ್ಐ ಜೊತೆ ಕೈಜೋಡಿಸಬೇಕು ಎಂದರು.
ವಿಜಯನಗರ ಸಾಮ್ರಾಜ್ಯದ ವಿಶ್ವಪಾರಂಪರಿಕ ತಾಣಗಳನ್ನು ನೋಡಿ ತುಂಬಾ ಸಂತಸವಾಗಿದೆ ಎಂದರು.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಎಂ.ಉಷಾ ಮತ್ತಿತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…