ಶಹಾಬಾದ : ಸಮೀಪದ ತೊನಸನಹಳ್ಳಿ(ಎಸ್) ಗ್ರಾಮದ ಕನಕ ಭವನ ಮುಂಭಾಗದಲ್ಲಿ ಮತ್ತು ಸುತ್ತಮುತ್ತಲಿನ ಮನೆಯ ಮುಂದಿನ ರಸ್ತೆಯ ಮೇಲೆ ಪ್ರತಿನಿತ್ಯ ಕೊಳಚೆ ನೀರು ಹರಿಯುತ್ತಿದ್ದು, ಕೂಡಲೇ ಗ್ರಾಪಂ ಅಧಿಕಾರಿಗಳು ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿ, ಚರಂಡಿ ನಿರ್ಮಾಣ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಿತ್ಯ ಇದೇ ರಸ್ತೆಯನ್ನೇ ದಾಟಿಕೊಂಡು ಮಕ್ಕಳು ಊರಿನ ಜನರು ಹೋಗಬೇಕಾಗುತ್ತದೆ.ಈಚೆಗಿನ ದಿನಗಳಲ್ಲಿ ಚರಂಡಿ ನೀರು ಮಿನಿ ಹಳ್ಳದಂತೆ ಹರಿದು ಜಮಾವಣೆಗೊಳ್ಳುತ್ತಿದೆ. ಇದರಿಂದ ರೋಗಾಣುಗಳು ಉತ್ಪತ್ತಿಯಾಗಲು ದಾರಿಯಾಗುತ್ತಿದೆ. ಅಲ್ಲದೇ ಗಬ್ಬು ನಾರುತ್ತಿರುವುದರಿಂದ ಮೂಗು ಮುಚ್ಚಿಕೊಂಡೇ ಓಡಾಡುವ ಪರಿಸ್ಥಿತಿ ಬಂದೋದಗಿದೆ.
ಈ ಗಲೀಜು ವಾತಾವರಣದಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ.ಅಲ್ಲದೇ ಡೆಂಗ್ಯೂ ರೋಗಗಳು ಪತ್ತೆಯಾಗುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ವ್ಯಕ್ತವಾಗಿದೆ.ಆದ್ದರಿಂದ ಈ ಕೂಡಲೇ ಚರಂಡಿ ಸ್ವಚ್ಛತೆ ಹಾಗೂ ಗ್ರಾಮದಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕಾಗಿದೆ.
ಶಾಸಕ ಬಸವರಾಜ ಮತ್ತಿಮಡು ಅವರು ಕೇವಲ ಕಾಮಗಾರಿ ಚಾಲನೆಗೆ ಬರದೇ ಸ್ವಲ್ಪ ಗ್ರಾಮದೊಳಗೆ ಒಮ್ಮೆ ಸಂಚರಿಸಿ ಜನರ ಕಷ್ಟಗಳನ್ನು ತಿಳಿದುಕೊಳ್ಳುವ ಗೋಜಿಗೆ ಹೋಗುತ್ತಿಲ್ಲ .ಅಲ್ಲದೇ ತಮ್ಮ ಪಕ್ಷದ ಮುಖಂಡರ ಮಾತು ಕೇಳಿ ಹೋಗುತ್ತಾರೆ ವಿನಃ ಗ್ರಾಮಸ್ಥರ ಗೋಳು ಕೇಳುತ್ತಿಲ್ಲ ಎಂದು ಗ್ರಾಮದ ಜನರು ಹೇಳುತ್ತಾರೆ.
ಕೂಡಲೇ ಚುನಾಯಿತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರಂಡಿ ಕಾಮಗಾರಿ ಕೈಗೊಂಡು ಈ ನರಕಯಾತನೆಯಿಂದ ಮುಕ್ತಿ ಕೊಡಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…