ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ರಾಜ್ಯದ ಮಹಿಳಾ ನೌಕರರರಿಗೆ ಸಾಂವಿಧಾನಿಕ ಮೀಸಲಾತಿ ಒದಗಿಸಿ ನ್ಯಾ ಕಾಪಾಡುವಂತೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ (ಸರಕಾರಿ ಅನುದಾನಿತ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ರಾಜು ಲೆಂಗಟಿ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಚವ್ಹಾಣ, ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ, ಉಪಾಧ್ಯಕ್ಷೆ ಎಸ್ ವಿಶಾಲಾಕ್ಷೀ, ಸಹಕಾರ್ಯದರ್ಶಿಗಳಾದ ಮೀನಾಕ್ಷಿ ಬನಸೋಡೆ, ಜಯಶ್ರೀ ನಾಗಶೆಟ್ಟಿ, ರೇಣುಕಾ ಎಸ್, ಸಂಘಟನಾ ಕಾರ್ಯದರ್ಶಿಗಳಾದ ಶ್ರಿದೇವಿ ಶಿರಹಟ್ಟಿ, ವಿಶಾಲಾಕ್ಷಿ ಬಿ.ಎಮ್ ಹಾಗೂ ತಾಲೂಕ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಕೋಶಾಧ್ಯಕ್ಷರು ಇದ್ದರು.