’ಹೆತ್ತವರು, ಗುರು-ಹಿರಿಯರನ್ನು ಗೌರವಿಸುವ ಸಂಸ್ಕೃತಿ ಮೈಗೂಡಲಿ’

ಕಲಬುರಗಿ: ಮಕ್ಕಳು ತಮಗೆ ಹೆತ್ತವರನ್ನು ಭಾರವಲ್ಲವೆಂದು ತಿಳಿದು ಗೌರವಿಸುವ, ಹೆತ್ತವರ ಇಳಿವಯಸ್ಸಿನಲ್ಲಿ ಅವರಿಗೆ ರಕ್ಷಣೆ ನೀಡುವ ಭಾರತೀಯ ಶ್ರೇಷ್ಟ ಸಂಸ್ಕೃತಿಯನ್ನು ಬಾಲ್ಯದಿಂದಲೇ ಮೈಗೂಡಿಸಿಕೊಳ್ಳಬೇಕು. ಗುರು-ಹಿರಿಯರನ್ನು ಗೌರವಿಸಿ, ಅವರ ಅನುಭವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉನ್ನತವಾದ ಸಾಧನೆಯನ್ನು ಮಾಡಬೇಕೆಂದು ಜಿಲ್ಲಾ ವಿಜ್ಞಾನ ಕೇಂದ್ರದ ಅಧಿಕಾರಿ ಲಕ್ಷ್ಮೀನಾರಾಯಣ ಎಸ್.ಎನ್ ಯುವ ಜನತೆಗೆ ಕಿವಿಮಾತು ಹೇಳಿದರು.

ನಗರದ ಆಳಂದ ರಸ್ತೆಯ ಸಂತೋಷ ಕಾಲನಿಯ ಕೆಎಚ್‌ಬಿ ಗ್ರೀನ ಪಾರ್ಕ ಬಡಾವಣೆಯ ಹನುಮಾನ ದೇವಸ್ಥಾನದ ಆವರಣದಲ್ಲಿ ’ಕೆಎಚ್‌ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ ಮತ್ತು ’ಸ್ನೇಹ ಸಂಗಮ ವಿವಿಧೋದ್ದೇಶ ಸಂಘ’ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಂಜೆ ಜರುಗಿದ ಹೆತ್ತವರ ಪೂಜಿಸಿ, ಸಂಸ್ಕಾರ ಸಮಾಜ ನಿರ್ಮಿಸಿ ಎಂಬ ಘೋಷವಾಕ್ಯದೊಂದಿಗೆ ’ಹೆತ್ತ ತಾಯಿ-ತಂದೆಯರ ಪಾದಪೂಜೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿಶೇಷ ಉಪನ್ಯಾಸ ನೀಡಿದ ಪ್ರವಚನಕಾರ ಸಂಗಮೇಶ ಶಾಸ್ತ್ರಿ ಮಾಶಾಳ, ಹಿರಿಯರು ತಮ್ಮಲ್ಲಿರುವ ಹಿರಿತನದ ಜ್ಞಾನ, ಅನುಭವವನ್ನು ಸಮಾಜಕ್ಕೆ ನೀಡಬೇಕು. ಕಿರಿಯರು ಅವರ ಅನುಭವದ ಮಾತುಗಳನ್ನು ಆಲಿಸಿ ಮುನ್ನಡೆಯಬೇಕು. ಎಂತಹ ಸಂದರ್ಭದಲ್ಲಿಯೂ ವಯೋವೃದ್ಧರನ್ನು ವೃದ್ಧಾಶ್ರಮಕ್ಕೆ ನೂಕುವ ನೀಚ ಬುದ್ಧಿ ಬೇಡ. ನಾವು ನಮ್ಮ ಹೆತ್ತವರನ್ನು ಚೆನ್ನಾಗಿ ಆರೈಕೆ ಮಾಡಿದರೆ, ಅದನ್ನು ಅನುಕರಣೆ ಮಾಡಿ ನಮ್ಮ ಮಕ್ಕಳು ಮುಂದೆ ನಮ್ಮನ್ನು ಸರಿಯಾಗಿ ರಕ್ಷಣೆ ಮಾಡುತ್ತಾರೆ. ಉತ್ತಮ ಸಂಸ್ಕಾರ ಬೆಳೆಸುವುದು ಅವಶ್ಯಕವಾಗಿದೆಯೆಂದು ಅನೇಕ ದೃಷ್ಟಾಂತಗಳ ಮೂಲಕ ವಿವರಿಸಿದರು.

ಪಾಲಕರಾದ ಮಾಳಾಬಾಯಿ ಎ.ಪೂಜಾರಿ, ವಿಠಾಬಾಯಿ ಎಸ್.ಅಟ್ಟೂರ, ಭೀಮರಾವ ಖೇಳಗಿ, ನಾಗೇಂದ್ರಯ್ಯ ಮಠ, ಮಮತಾ ಲಗಶೆಟ್ಟಿ, ಪದ್ಮಾವತಿ ಎಂ.ಬುಜ್ಜಿ, ಲಕ್ಷ್ಮೀಬಾಯಿ ಬಿ.ಅಟ್ಟೂರ, ಮಹಾನಂದ ಲಿಂಗೆ, ಅಂಬಾರಾಯ ವಾಡಿ, ಶಾಂತಪ್ಪ ಪಡನೂರ, ಅನ್ನಪೂರ್ಣ ಪಾಟೀಲ ಅವರಿಗೆ ತಮ್ಮ ಮಕ್ಕಳು ಪಾದಪೂಜೆ ನೆರವೇರಿಸಿ ಗೌರವಿಸಿದರು. ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಅವರಿಂದ ಜರುಗಿದ ಹಾಸ್ಯ ಮತ್ತು ರಾಜು ಹೆಬ್ಬಾಳ ಅವರಿಮದ ಜರುಗಿದ ಜಾನಪದ ಗೀತೆಗಳು ಮನಸೂರೆಗೊಳಿಸಿತು. ಪಾದಪೂಜೆ ನೆರೆದಿದ್ದವರನ್ನು ಭಾವಪರವಶರನ್ನಾಗಿಸಿತು. ಈ ಕಾರ್ಯಕ್ಕೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಸಂಜೀವಕುಮಾರ ಶೆಟ್ಟಿ, ನ್ಯಾಯವಾದಿ ಹಣಮಂತರಾಯ ಎಸ್.ಅಟ್ಟೂರ, ಎಚ್.ಬಿ.ಪಾಟೀಲ, ಸಂಗಮೇಶ್ವರ ಸರಡಗಿ, ಸೂರ್ಯಕಾಂತ ಸಾವಳಗಿ, ಮಲಕಾರಿ ಪೂಜಾರಿ, ಶಿವಕಾಂತ ಚಿಮ್ಮಾ, ವೀರೇಶ ಬೋಳಶೆಟ್ಟಿ ನರೋಣಾ, ಬಸವರಾಜ ಹೆಳವರ ಯಾಳಗಿ, ದತ್ತಾತ್ರೇಯ ಸಾಬಣಿ, ಶ್ರೀನಿವಾಸ ಬುಜ್ಜಿ, ವೀರಯ್ಯ ಹಿರೇಮಠ, ರವೀಂದ್ರ ಗುತ್ತೇದಾರ ಕಲ್ಯಾಣರಾವ, ಮಲ್ಲಿನಾಥ ಕುಮಸಿ, ಮಹೇಶ ತೆಲೆಕುಣಿ, ಮಲ್ಲಿನಾಥ ಮಾಸ್ತರ್, ದಿಲಿಪ ಬಕರೆ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420