ಕಲಬುರಗಿ :ಕಲ್ಯಾಣಕರ್ನಾಟಕಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಇಂದು ಜಿಲ್ಲಾಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿಯವರಿಗೆ ಭೇಟಿಯಾಗಿ ಬಾಗಲಕೋಟೆಯಲ್ಲಿ ಕಲಬುರಗಿಜನರು ನೀರಾವರಿಕ್ಷೇತ್ರದಲ್ಲಿ ಸೋಮಾರಿಗಳು ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದರು.
ಈ ವಿಷಯಕ್ಕೆ ಸಂಬಂಧಿಸಿ ಇಂದುಅವರನ್ನು ಸ್ಪಷ್ಟೀಕರಣ ಕೇಳಿದಾಗ ತಾವು ಮಾತನಾಡುವಾಗ ಆ ರೀತಿಯ ಶಬ್ದ ಬಳಕೆಯಾಗಿದ್ದು, ನನ್ನ ಮನಸ್ಸಿಗೆ ಬಹಳ ನೋವಾಗಿದೆ. ನನ್ನಉದ್ದೇಶ ಕಲಬುರಗಿ ಮತ್ತು ಕಲಬುರಗಿರೈತರ ಹಾಗೂ ಇಲ್ಲಿಯ ನೀರಾವರಿ ಯೋಜನೆಗಳ ಅಭಿವೃದ್ಧಿಯದೃಷ್ಟಿಕೋನದಿಂದ ಕಾಳಜಿ ವಹಿಸಿ ಮಾತನಾಡಿರುವೆ.
ಇದರಿಂದಕಲಬುರಗಿ ಮಹಾಜನತೆಗೆ ನೋವಾಗಿದ್ದು,ಇದಕ್ಕೆನಾನು ವಿಶಾದ ವ್ಯಕ್ತಪಡಿಸುತ್ತೇನೆ. ಅಷ್ಟೇ ಅಲ್ಲದೇ ಈ ವಿಷಯ ಸಾರ್ವಜನಿಕ ವಿಷಯವಾಗಿರುವುದರಿಂದ ನಾನು ಯಾವುದೇ ಪ್ರತಿಷ್ಠೆಗೆ ಒಳಗಾಗದೆ ಕಲಬುರಗಿಜನಮಾನಸಕ್ಕೆಕ್ಷಮೆಯಾಚನೆಕೇಳಲು ಸಹ ನನಗೆ ಯಾವುದೇರೀತಿಯಸ್ವಾಭಿಮಾನದ ಪ್ರತಿಷ್ಟೆಇಲ್ಲವೆಂದುಸ್ಪಷ್ಟೀಕರಣ ನೀಡಿದರು.
ಇದೇ ಸಂದರ್ಭದಲ್ಲಿಅವರು ಮಾತನಾಡಿ ಕಲಬುರಗಿಜಿಲ್ಲೆಯರಚನಾತ್ಮಕ ಪ್ರಗತಿಯ ಬಗ್ಗೆ ಸಮಿತಿ ಬರುವ ದಿನಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿರುವ ವಿಚಾರ ಸಂಕಿರಣಕಾರ್ಯಕ್ರಮದಲ್ಲಿ ಭಾಗ ವಹಿಸಲು ಆದಷ್ಟು ಶೀಘ್ರ ದಿನ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ಧಾರೆಡ್ಡಿ ಬಲಕಲ್, ಜ್ಞಾನಮಿತ್ರ ಸ್ಯಾಮ್ಯೂವೆಲ್, ಸಾಲೋಮನ ದಿವಾಕರ, ಸುನೀಲಕುಮಾರಎಚ್. ಕೇದಾರನಾಥ, ಮಲ್ಲಿಕಾರ್ಜುನ, ಶರಣಪ್ಪ ಸೇರಿದಂತೆಅನೇಕರು ಉಪಸ್ಥಿತರಿದ್ದರು.
ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…
ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…
ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…
ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…
ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…