ಕಲಬುರಗಿ: ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಜನ ನೀರು ಕುಡಿದು ಪ್ರತಿ ದಿನ 50 ಜನ ಜ್ವರ, ಕೆಮ್ಮು, ವಾಂತಿ, ಚೇಳಿ ಹೀಗೆ ನಾನಾ ರೋಗಕ್ಕೆ ತುತ್ತಾಗಿ ಆಸ್ಪತ್ರೆಗೆ ಸೇರುತ್ತಿದ್ದಾರೆ.
ಒಂದು ವಾರದಿಂದ ಸತತವಾಗಿ ಈ ರೀತಿಯಾಗಿ ಜನ ಸರಕಾರಿ ಆಸ್ಪತ್ರೆಗೆ ಮತ್ತು ಖಾಸಗಿ ಆಸ್ಪತ್ರೆ ಗೆ ದಾಖಲಾಗುತ್ತಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಆಸ್ಪತ್ರೆಗೆ ದಾಖಲೆಯಾಗುತ್ತಿದ್ದಾರೆ. ಈ ರೀತಿ ಜನ ಆರೋಗ್ಯ ಹಾಳಾಗಿ ಆಸ್ಪತ್ರೆಗೆ ದಾಖಲೆಯಾಗುತ್ತಿರುವದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮ ಪಂಚಾಯತ್ ಸಿಬ್ಬಂದಿ ಪಂಪ ಆಪರೇಟರ್ ಮಹಿಳೆಯಾಗಿದ್ದು ಅವರ ಪರವಾಗಿ ಬೇರೆಯವರು ಕೆಲಸ ಮಾಡುತ್ತಿದ್ದಾರೆ. ಪೂರೈಕೆಯಾಗುವ ನೀರಿನ ಟ್ಯಾಂಕ್ ಸರಿಯಾಗಿ ಸ್ವಚ್ಛಗೊಳಿಸದೇ, ವರ್ಷಕ್ಕೆ ಒಮ್ಮೆ ಸ್ವಚ್ಛ ಮಾಡುವದ್ದು, ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ನೀರಿನಲ್ಲಿ ಹಾನಿಕಾರಕ ಜೀವಗಳು ತುಂಬಿವೆ. ಈ ನೀರು ಗ್ರಾಮಕ್ಕೆ ಪೂರೈಕೆಯಾಗುತ್ತದೆ.
ಗ್ರಾಮದಲ್ಲಿ ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ಚರಂಡಿ ನೀರು ರಸ್ತೆ ಮೇಲೆ ನಿಂತು ಸೊಳ್ಳೆಗಳು ಹುಟ್ಟಿಕೊಂಡು ಮಲೇರಿಯಾ, ಟೈಫಾಡ ರೋಗಗಳು ಹೆಚ್ಚುತ್ತಿವೆ. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಈ ಮಳೆಗಾಲದಲ್ಲಿ ಒಂದು ಬಾರಿಯೂ ಬ್ಲಿಚಿಂಗ ಪಾವಡರ್ ಸಿಪರಣೆ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೋವಿಡ 3ನೇ ಅಲೆಯ ಭೀತಿ ಇದ್ದರು ಸಹ ಸ್ಯಾನಿಟಾಯೀಜರ್ ಸಿಂಪರಣೆ ಮಾಡಿಲ್ಲ ಎಂದು ಸ್ಥಳೀಯ ಜನ ಮಾಹಿತಿ ನೀಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…