ಕಲಬುರಗಿ: ನಗರದ ಕನ್ನಡ ಭವನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ 2020-21ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಹೆಳವ ಸಮುದಾಯದ ಹೆಸರು ಉತ್ತುಂಗಕ್ಕೇರಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರಣೋತಿ ಗುರಲಿಂಗಪ್ಪ (93.83% ಪಿ.ಯು.ಸಿ), ಜ್ಯೋತಿ ಸಾಯಬಣ್ಣ (81% ಪಿ.ಯು.ಸಿ), ಭೀಮಣ್ಣ ಸಾಯಬಣ್ಣ (80% ಪಿ.ಯು.ಸಿ), ರಾಹುಲ್ ಸಂಜೀವಕುಮಾರ (91.96%), ಅನಿತಾ ಮಲ್ಲೇಶ (90.72%), ಸಿದ್ದಾರ್ಥ ಶ್ರವಣಕುಮಾರ (90%), ಶಿವಕುಮಾರ ಸಿದ್ದಪ್ಪ (90%), ವೈಶ್ಣವಿ ಪ್ರಭು ಯಾಳಗಿ (87.04%), ಧನರಾಜ ನಾಗೇಂದ್ರ (86.24%), ವಿಕಾಸ ಲಕ್ಷ್ಮಣ (85.76%), ಆಕಾಶ ಗಂಗಾಧರ (84.16%), ಸುನೀಲ್ ಲಾಲಪ್ಪ (83.68%), ಆಕಾಶ ಗುಂಡಪ್ಪ (83.36%), ಅಜಯಕುಮಾರ ಶಂಕರ (83.04%), ಪೂಜಾ ಲಾಲಪ್ಪ (80%), ಕಾರ್ತಿಕ ಸುರೇಶ (79.04%), ದೇವರಾಜ ದಶರತ (77.75%) ಅವರಿಗೆ ಮುಖ್ಯ ಅತಿಥಿಗಳಾದ ಜ್ಞಾನ ಇನಸ್ಟಿಟ್ಯೂಟ್ ಆಫ್ ಲರ್ನಿಂಗ್ ನ ಸಂಸ್ಥಾಪಕ ಅಧ್ಯಕ್ಷರಾದ ಸಂಗಮೇಶ ಸರಡಗಿ ಹಾಗೂ ಕಲಬುರಗಿ ಜಿಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೀರಭದ್ರ ಸಿಂಪಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪ್ರಾಸ್ಥಾವಿಕವಾಗಿ ಮಾತನಾಡಿದ ಹೆಳವ ಸಮಾಜದ ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ ಸಮುದಾಯದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮನೆಯೇ ಮೋದಲ ಪಾಠ ಶಾಲೆ, ತಾಯಿಯೇ ಮೋದಲ ಗುರು ಎನ್ನುವಂತೆ ಮಕ್ಕಳು ಸದಾ ಹೆತ್ತವರನ್ನು ಪೂಜಿಸಬೇಕು. ಕಲಿತ ಶಾಲೆ, ಶಿಕ್ಷಣ ನೀಡಿದ ಗುರುವೃಂದಕ್ಕೆ ಎಂದು ಮರೆಯಬಾರದು. ವಿದ್ಯಾರ್ಥಿ ಜೀವನದಲ್ಲಿ ಸಂಪಾದಿಸಿದ ಜ್ಞಾನ ಸಮಾಜದ ಒಳಿತಿಗಾಗಿ ಬಳಕೆಯಾಗಬೇಕು. ಸಮುದಾಯದ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಶಿವಕಾಂತ ಚಿಮ್ಮಾ ಮಾತನಾಡುತ್ತಾ ಮಾಡುವ ಕೆಲಸದಲ್ಲಿ ಶ್ರದ್ಧೆ, ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಅದರ ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು.
ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ ನಿರೂಪಿಸಿದರು.ವಿದ್ಯಾರ್ಥಿನಿ ಪೂಜಾ ಪ್ರಾರ್ಥಿಸಿದಳು. ಅಶೋಕ ದೇಗಲಮಡಿ ಸ್ವಾಗತಿಸಿದರು. ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಮಾರುತಿ ಹೆಳವರ, ತಿಪ್ಪಣ್ಣ ಹೆಳವರ ರಾಂಪೂರಹಳ್ಳಿ, ಅಂಕಿತಾ ಹೆಳವರ, ಪ್ರಭು ಎಸ್. ಯಾಳಗಿ, ಗುರಲಿಂಗ ಹೆಳವರ, ಗಂಗಾದರ ಹೆಳವರ, ಲಕ್ಷ್ಮಣ ಹೆಳವರ, ಶಿವಾನಂದ ಬೈರಾಮಡಗಿ, ರಾಜು ಹೆಳವರ, ನಾಗಪ್ಪ ಹೆಳವರ, ಅಶೋಕ ಮದುರಾ (ಬಿ), ದೇವಪ್ಪ ಚಿಗರಹಳ್ಳಿ, ಹಣಮಂತ ಲಕ್ಷ್ಮಣ, ಪುಂಡಲೀಕ, ರಮೇಶ ಮಾಣಿಕರಾವ ಮತ್ತು ಇನ್ನಿತರರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…