ಕಲಬುರಗಿ: ಜಿಲ್ಲಾ ಹೋಟೆಲ್, ಬೇಕರಿ, ವಸತಿ ಗೃಹ ಮತ್ತು ಬಾರ್ ಮಾಲೀಕರ ಮಾಲೀಕರ ಸಂಘದ ವತಿಯಿಂದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿಯವರಿಗೆ ಸನ್ಮಾನಿಸಲಾಯಿತು.
ಕಲಬುರಗಿ ಜಿಲ್ಲೆಯಲ್ಲಿ ವರ್ತಕರು ಕೋವಿಡ್ ಸಂದರ್ಭದಲ್ಲಿ ಮತ್ತು ನಂತರದ ಲಾಕ್ ಡೌನ್ ನಿಯಮಗಳಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು ಈ ಬಗ್ಗೆ ಉದ್ಯಮ ಸ್ನೇಹಿ ನಿರ್ಧಾರ ತೆಗೆದುಕೊಂಡು ನೆರವಾಗಲು ಸರಕಾರಕ್ಕೆ ಸ್ಪಷ್ಟ ಸೂಚನೆ ನೀಡಲು ಕೋರಿ ಆದೇಶ ಹೊರಡಿಸುವಂತೆ ಪ್ರಯತ್ನಿಸಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಗಾರಿಕಾ ಸಚಿವರಾದ ಮುರುಗೇಶ್ ಆರ್ ನಿರಾಣಿ ಅವರಿಗೆ ಕಲಬುರಗಿ ಜಿಲ್ಲಾ ಹೋಟೆಲ್, ಬೇಕರಿ, ವಸತಿ ಗೃಹ ಹಾಗೂ ಬಾರ್ ಮಾಲೀಕರ ಸಂಘದ ವತಿಯಿಂದ ಸನ್ಮಾನಿಸಿ ಮನವಿ ಪತ್ರ ಸಲ್ಲಿಸಿದರು.
ಉದ್ಯಮಿಗಳ ಪರವಾಗಿ ರಾಜ್ಯ ಸರಕಾರ ಸಕಾಲಿಕ ಸ್ಪಂದನೆ ಮಾಡುತ್ತಿದ್ದು ಉಸ್ತುವಾರಿ ಸಚಿವರು ವರ್ತಕರ ಸಮಸ್ಯೆ ಆಲಿಸಿ ತಕ್ಷಣದಲ್ಲೇ ವಾರಾದ್ಯಾತ ಲಾಕ್ ಡೌನ್ ತೆರವು, ಕೋವಿಡ್ ಸುರಕ್ಷತಾ ನಿಯಮ ಕಡ್ಡಾಯ ಪಾಲನೆಯೊಂದಿಗೆ ಮುಕ್ತ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸುವ ಭರವಸೆ ನೀಡಿದ್ದಲ್ಲದೆ ಸರಕಾರ ನಿಮ್ಮ ಜೊತೆ ಸದಾ ಇದೆ ಎಂದು ನಿರಾಣಿ ತಿಳಿಸಿ ವರ್ತಕರಲ್ಲಿ ಆತ್ಮ ವಿಶ್ವಾಸ ತುಂಬಿದ್ದಾರೆ ಎಂದು ಸಂಘದ ಕಾರ್ಯದರ್ಶಿ ನರಸಿಂಹ ಮೆಂಡನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರವೀಣ್ ಜತ್ತನ್, ರಮಾನಂದ ಭಂಡಾರಿ ಮತ್ತು ವೆಂಕಟೇಶ ಕಡೇಚೂರ್ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಮರಾನಾಥ್ ಪಾಟೀಲ್, ರವಿ ಬಿರಾದಾರ್ ಉದ್ಯಮಿಗಳಾದ ವೆಂಕಟೇಶ್ ಕಡೇಚೂರ್, ಪ್ರವೀಣ್ ಜತ್ತನ್, ರಮಾನಂದ ಭಂಡಾರಿ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…