ಕಲಬುರಗಿ: ಇಂದು ಇಲ್ಲಿನ ಕಟ್ಟಿಸಂಗಾವಿ ಗ್ರಾಮದ ನಿಂಗಯ್ಯ ಮುತ್ಯಾ ಜಾತ್ರಾ ಮಹೋತ್ಸವವು ಸಂಭ್ರಮದೊಂದಿಗೆ ನೆರವೇರಿತು.
ನಿಂಗಯ್ಯ ಅವರ ಮೂರ್ತಿಯ ಗಂಗಾಸ್ನಾನ ಕಾರ್ಯಕ್ರಮ ನಡೆಯಿತು. ಬಳಿಕ ಪಲ್ಲಕ್ಕಿ ಮೆರವಣಿಗೆ ನಡೆಯಿತು. ನಿಂಗಪ್ಪ ಪೂಜಾರಿ,ಬೀರಪ್ಪ ಪೂಜಾರಿ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಕಲಾ ತಂಡಗಳಿಂದ ಭಜನೆ ಮತ್ತು ಡೊಳ್ಳಿನ ಪದ ಕಾರ್ಯಕ್ರಮ ಜರುಗಿದ್ದು, ರಾಜವಾಳ, ಮದ್ರಿ ,ಏನಗುಂಟಿ, ಗುಡೂರು , ಹಸನಾಪುರ ಸೇರಿದಂತೆ 40ಹಳ್ಳಿಯ ಜನರು ಜೇವರ್ಗಿ ತಾಲ್ಲೂಕಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಎಲ್ಲಾ ಜಾತಿ, ಧರ್ಮ ಜನರನ್ನು ಒಳಗೊಂಡು ಭಾವೈಕ್ಯತೆಯಿಂದ ನಿಂಗಯ್ಯ ಮುತ್ಯಾ ಜಾತ್ರೆಯಲ್ಲಿ ಪರಸ್ಪರ ಬಾಂಧವ್ಯವನ್ನು ಬೆಸೆಯುವಂತೆ ಮಾಡುತ್ತದೆ. ಈ ಜಾತ್ರೆಯಲ್ಲಿ ಉತ್ತಮ ಗೌಡ, ಮೌಲಲಿ, ಚಾವು ಸೇನೆ, ರಾಜೇಂದ್ರ ಸಿದ್ದಣ್ಣ ರಾಜವಾಳ, ಸಂಗಪ್ಪ ಹಳಿಮನಿ ಬಸವರಾಜ ಹಳ್ಳಿ ನಿಂಗಪ್ಪ ಪೂಜಾರಿ ಬಂದಹಳ್ಳಿ ಸೇರಿದಂತೆ ಅಪಾರ ಭಕ್ತರು ಪಾಲ್ಗೊಂಡಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…