ಕಲಬುರಗಿ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಸೆ.3 ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯೊಂದನ್ನು ಹೊರಡಿಸಿದ ಅವರು, ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸಿ, ಜ್ಯಾತ್ಯಾತೀತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಈ ಬಾರಿ ಎಲ್ಲಾ ಪಕ್ಷದ ಮುಖಂಡರು ಯುವಕರಿಗೆ ಅವಕಾಶ ನೀಡಿದ್ದು ಉತ್ತಮ ಬೆಳವಣಿಗೆಯಾಗಿದೆ, ಎಲ್ಲಾ ನಾಗರಿಕರು ನಿರ್ಭಿತಿಯಿಂದ ಮತದಾನ ಕೇಂದ್ರಕ್ಕೆ ಹೋಗಿ ಉತ್ತಮ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಸಂಧರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗಳು ನಡೆಯುತ್ತಿರುವುದರಿಂದ ಮಾಸ್ಕ್ ಮತ್ತು ಸೆನಿಟೈಸರ್ ತಾವು ಬಳಸಿ, ಇನ್ನೋಬ್ಬರಿಗೂ ಜಾಗೃತಿ ಮೂಡಿಸಬೇಕೆಂದು ಅವರು ತಿಳಿಸಿದ್ದಾರೆ.