ವಿಕಲಚೇತನರು ತುರ್ತಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಮಾಹಿತಿ ನೀಡಲು ಸೂಚನೆ

ಕಲಬುರಗಿ: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕು ಮಟ್ಟದಲ್ಲಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಮ್.ಆರ್.ಡಬ್ಲ್ಯೂ) ತಾಲೂಕಾ ಪಂಚಾಯತ್ ಕಚೇರಿಗಳಲ್ಲಿ ಜಿಲ್ಲೆಯ ಎಲ್ಲಾ ವಿಕಲಚೇತನರ ಮಾಹಿತಿ ನಮೂದಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವಿಕಲಚೇತನ ಸರ್ಕಾರಿ ನೌಕರರು, ಸಾಮಾನ್ಯ ವಿಕಲಚೇತನರು, ಉದ್ಯೋಗಸ್ಥ ವಿಕಲಚೇತನರು ಹಾಗೂ ವಿಕಲಚೇತನ ವಿದ್ಯಾರ್ಥಿಗಳು ಜಿಲ್ಲೆಯಲ್ಲಿನ ಎಲ್ಲಾ ವಿಕಲಚೇತನರು ತುರ್ತಾಗಿ ತಮ್ಮ ಆಧಾರ ಕಾರ್ಡ್, ರೇಶನ್ ಕಾರ್ಡ್, ವಿಕಲಚೇತನರ ಗುರುತಿನ ಚೀಟಿ ಅಥಾವಾ ಯು.ಡಿ.ಐ.ಡಿ., ಜಾತಿ ಮತ್ತು ಆದಾಯ ಪ್ರಮಾಣ ಪತ್ರ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಎಂ.ಆರ್. ಡಬ್ಲ್ಯೂ, ವಿ.ಆರ್.ಡಬ್ಲ್ಯೂ. ಯು.ಆರ್.ಡಬ್ಲ್ಯೂ ಅವರು ಘೋಷಿಸಿರುವಂತೆ ಜಿಲ್ಲೆಯಲ್ಲಿ 25674 ವಿಕಲಚೇತನರು ಇದ್ದು, ಈವರೆಗೆ ಕೇವಲ 17255 ವಿಕಲಚೇತರ ಮಾಹಿತಿಯು ತಂತ್ರಾಂಶದಲ್ಲಿ ನಮೂದು ಆಗಿರುತ್ತದೆ.

ಜಿಲ್ಲೆಯಲ್ಲಿನ ಹಲವಾರು ಜನ ವಿಕಲಚೇತನರು ಸದರಿ ತಂತ್ರಾಂಶದಲ್ಲಿ ಮಾಹಿತಿಯನ್ನು ಆಳವಡಿಸಿಕೊಂಡಿರುವುದಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ವಿಕಲಚೇತನರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳು ಮತ್ತು ಯೋಜನೆಗಳು ಕಲ್ಪಿಸಿಕೊಡಲು ಸಾಧ್ಯವಾಗುವುದಿಲ್ಲ. ಮುಂದಿನ ದಿನಗಳಲ್ಲಿ ತಂತ್ರಾಂಶದಲ್ಲಿ ಮಾಹಿತಿ ನಮೂದಿಸಿಕೊಳ್ಳದೇ ಇರುವ ವಿಕಲಚೇತನರಿಗೆ ಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸಹ ಸಾಧ್ಯವಾಗುವುದಿಲ್ಲ.

ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ವಿಕಲಚೇತನರು ತುರ್ತಾಗಿ ಮೇಲ್ಕಂಡ ದಾಖಲಾತಿಗಳೊಂದಿಗೆ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಹಾಗೂ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಮ್.ಆರ್.ಡಬ್ಲ್ಯೂ) ತಾಲೂಕಾ ಪಂಚಾಯತ್ ಕಚೇರಿ ಅಫಜಲಪೂರ-(ಮೊಬೈಲ್ ಸಂ.9448808141), ಆಳಂದ-(ಮೊಬೈಲ್ ಸಂಖ್ಯೆ 9741792291), ಚಿತ್ತಾಪೂರ-(ಮೊಬೈಲ್ ಸಂ.9845204328), ಚಿಂಚೋಳಿ-(ಮೊಬೈಲ್ ಸಂ.9880671171), ಜೇವರ್ಗಿ-(ಮೊಬೈಲ್ ಸಂ.9741875881), ಕಲಬುರಗಿ-(ಮೊಬೈಲ್ ಸಂ.9972079714) ಹಾಗೂ ಸೇಡಂ- ಮೊಬೈಲ್ ಸಂಖ್ಯೆ 9902417925) ಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420