ಬಿಸಿ ಬಿಸಿ ಸುದ್ದಿ

ಏಳು ಜನ ಅಂತರರಾಜ್ಯ ಕಳ್ಳರ ವಶಕ್ಕೆ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಸುರಪುರ: ನಗರದಲ್ಲಿ ಕಳೆದ ತಿಂಗಳು ವ್ಯಕ್ತಿಯೊಬ್ಬರನ್ನು ಯಾಮಾರಿಸಿ ಹಣ ಎಗರಿಸಿ ಪರಾರಿಯಾಗಿದ್ದ ೭ ಜನ ಅಂತರರಾಜ್ಯ ಕಳ್ಳರ ಗ್ಯಾಂಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ವಿವರಣೆ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ:ಸಿ.ಬಿ.ವೇದಮೂರ್ತಿಯವರ ,ಜುಲೈ ೨೩ ರಂದು ತಾಲೂಕಿನ ಪೇಠ ಅಮ್ಮಾಪುರ ಗ್ರಾಮದ ವ್ಯಕ್ತಿ ಬಾಲಪ್ಪ ಎನ್ನುವವರು ಕರ್ನಾಟಕ ಬ್ಯಾಂಕಿನಿಂದ ೨ ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಹೋಗುತ್ತಿರುವಾಗ,ಅವರನ್ನು ಹಿಂಬಾಲಿಸಿದ್ದ ಕಳ್ಳರು ೫೦ ರೂಪಾಯಿ ನೋಟನ್ನು ಬೀಳಿಸಿ ಅದರಿಂದ ಬಾಲಪ್ಪ ಎನ್ನುವವರ ಗಮನ ಸೆಳೆದು ಅವರು ಡ್ರಾ ಮಾಡಿಕೊಂಡು ಹೋಗುತ್ತಿದ್ದ ೨ ಲಕ್ಷ ರೂಪಾಯಿ ಎಗರಿಸಿ ಪರಾರಿಯಾಗಿದ್ದರು.ಈ ಕುರಿತು ಪ್ರಕರಣ ದಾಖಲಾಗಿತ್ತು.

ಈ ಕೃತ್ಯ ನಡೆಸಿದ ಕಳ್ಳರು ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಇಂತದ್ದೆ ಕೃತ್ಯ ನಡೆಸಿದ್ದರು,ಅದಕ್ಕಾಗಿ ಹುನಗುಂದ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದರು.ನಂತರ ಎಸ್ಪಿಯವರಾದ ಡಾ:ಸಿ.ಬಿ ವೇದಮೂರ್ತಿ ಹಾಗು ಡಿವೈಎಸ್ಪಿ ವೆಂಕಟೇಶ ಉಗಿಬಂಡಿಯವರ ಮಾರ್ಗದರ್ಶನದಲ್ಲಿ ಪಿಐ ಸುನಿಲಕುಮಾರ್ ಮೂಲಿಮನಿಯವರ ನೇತೃತ್ವದ ತಂಡ ಈಗ ೭ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುರಪುರ ನಗರದಲ್ಲಿ ಹಣ ಕದ್ದಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ.

ಅಲ್ಲದೆ ಇವರಿಂದ ೨ ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ:ಸಿ.ಬಿ.ವೇದಮೂರ್ತಿಯವರು ತಿಳಿಸಿದ್ದಾರೆ.

ವಶಕ್ಕೆ ಪಡೆದ ಎಲ್ಲಾ ೭ ಜನ ಅಂತರರಾಜ್ಯ ಕಳ್ಳರನ್ನು ಮಂಗಳವಾರ ಪ್ರದರ್ಶಿಸಿದರು.ಈ ಸಂದರ್ಭದಲ್ಲಿ ಪಿಐ ಸುನೀಲಕಮಾರ್ ಮೂಲಿಮನಿ,ಪಿಎಸ್‌ಐಗಳಾದ ಚಂದ್ರಶೇಖರ ನಾರಾಯಣಪುರ,ಕೃಷ್ಣಾ ಸುಬೇದಾರ,ಚಿತ್ರಶೇಖರ ಹಾಗು ಪೊಲೀಸ್ ಪೇದೆಗಳು ಇದ್ದರು.

advertisement
emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

46 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago