ಮೈಸೂರು: ಮತ್ತೆ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಯನ್ನು ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ವತಿಯಿಂದ ನಗರದ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜನವರಿ 1ರಿಂದ ಸೆಪ್ಟೆಂಬರ್ 1ರ ನಡುವೆ ಎಲ್ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 190 ರೂ. ಹೆಚ್ಚಾಗಿದೆ. ಸದ್ಯದ ಗ್ಯಾಸ್ ಸಿಲಿಂಡರ್ ಬೆಲೆಗೆ ಹೋಲಿಸಿದರೆ, ಎಲೆಕ್ಟ್ರಿಕ್ ಒಲೆ ಕಡಿಮೆ ಬೆಲೆಗೆ ಸಿಗುತ್ತಿದೆ. ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಿದ್ದ ಸರ್ಕಾರ, ಬಳಿಕ ದಿನಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸಿತ್ತದೆ ಎಂದು ಪ್ರತಿಭಟನಕಾರರು ಅಸಮಧಾನ ಹೋರಹಾಕಿದರು.
ಸದ್ಯ ಕಳೆದ 2 ತಿಂಗಳಿನಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿಲ್ಲ. ಅಡುಗೆ ಎಣ್ಣೆಯ ಬೆಲೆಯೂ ಸಹ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಈಗ ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುವ ಮೂಲಕ ಗ್ರಾಹಕರಿಗೆ ಮತ್ತೆ ಬರೆ ಹಾಕಿದೆ ಈ ರೀತಿಯ ಆರ್ಥಿಕ ಹೊರೆಯನ್ನು ಖಂಡಿಸಿ ಪ್ರತಿಭಟಿಸುವುದು ಪ್ರಜಾಪ್ರಭುತ್ವದ ನಾಗರಿಕರೆಲ್ಲರ ಕರ್ತವ್ಯವಾಗಿದೆ ಎಂದು ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷರಾದ ಜಾಕೀರ್ ಹುಸೇನ್ ಕರೆ ನೀಡಿದರು.
ಮಂಜುಳಾ ಮಾನಸ, ಡೈರಿ ವೆಂಕಟೇಶ್, ಕೊರಿಯರ್ ವೆಂಕಟೇಶ್, ಹಿರಿಯ ರಂಗಕರ್ಮಿ ಕೆ,ಆರ್, ಗೋಪಾಲಕೃಷ್ಣ, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಮಾನವಿಕ, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ರಾಜ್ಯಾಧ್ಯಕ್ಷರಾದ ಪಿ ರಾಜು, ಜಿಲ್ಲಾ ಕನ್ನಡ ಚಳುವಳಿ ಹೋರಾಟಗಾರರಾದ ಶಿವಶಂಕರ್, ಪರಿಸರವಾದಿ ಭಾನು ಮೋಹನ್, ಸಮಾಜ ಸೇವಕಿ ಭವ್ಯ, ಡಾ,ಭರತ್, ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣೆ ರಾಜ್ಯ ಅಧ್ಯಕ್ಷರಾದ ದ್ಯಾವಪ್ಪ ನಾಯ್ಕ, ಪ್ರಶಾಂತ್ ಆರ್ಯ, ಮಂಜುನಾಥ್, ( ಸವಿತಾ ಸಮಾಜ) ,ರದಿ ವುಲ್ಲಾ, ಕಿರಣ್ ಕುಮಾರ್, ಪಂಪಾಪತಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…