ಇಂದು ಮತದಾನ: ಕಲಬುರಗಿ ಪಾಲಿಕೆಯ ಸಂಪೂರ್ಣ ಚಿತ್ರಣ

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಇದೇ ಇಂದು ಬೆಳಿಗ್ಗೆ 7 ಗಂಟೆಯಿಂದ 6 ಗಂಟೆಯವರೆಗೆ ಮತದಾನ ಜರುಗಲಿದ್ದು, ಬೆಳಿಗ್ಗೆಯಿಂದ ಮತದಾನ ಆರಂಭಗೊಂಡಿದೆ.

ಚುನಾವಣೆಯು ಶಾಂತಿಯುತ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಬೇಕಾಗಿರುವ ಎಲ್ಲಾ ಪೂರ್ವ ಸಿದ್ದತೆಗಳು ಈಗಾಗಲೇ ಜಿಲ್ಲಾಡಳಿತ ಕೈಗೊಂಡಿದೆ. ನಗರದ 55 ವಾರ್ಡ್‍ಗಳ 533 ಮತಗಟ್ಟೆಯಲ್ಲಿ ಚುನಾವಣೆ ನಡೆಯಲಿದ್ದು, ಪುರುಷರು 2,58,775, ಮಹಿಳೆಯರು 2,60,543, ಇತರೆ 146 ಸೇರಿದಂತೆ ಒಟ್ಟು 5,19,464 ಮತದಾರರಿದ್ದಾರೆ. ಎಂದು ಅವರು ಮಾಹಿತಿ ನೀಡಿದ್ದಾರೆ.

ಒಟ್ಟು 360 ಜನ ನಾಮಪತ್ರÀ ಸಲ್ಲಿಕೆಯಾಗಿದ್ದವು. ಅದರಲ್ಲಿ 19 ತಿರಸ್ಕøತವಾಗಿದ್ದು, 20 ಮಂದಿ ಹಿಂಪಡೆದಿರುತ್ತಾರೆ. ಒಟ್ಟಾರೆ 300 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ಅವರು ಅಂಕಿ-ಅಂಶ ನೀಡಿದ್ದಾರೆ.

533 ವಾರ್ಡ್‍ಗಳಲ್ಲಿ ಹಿಂದಿನ ಚುನಾವಣೆಯಲ್ಲಿ ಅಗಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು 54 ಅತೀ ಸೂಕ್ಷ್ಮ, 150 ಸೂಕ್ಷ್ಮ ಹಾಗೂ 329 ಸಾಮಾನ್ಯ ಮತಗಟ್ಟೆಗಳೆಂದು ಎಂದು ಗುರುತಿಸಲಾಗಿದೆ. ಸಮಸ್ಯೆಗಳಿರುವ ವಾರ್ಡ್‍ಗಳಲ್ಲಿ ಹೆಚ್ಚಿನ ಗಮನ ವಹಿಸಲಾಗಿದೆ. 533 ವಾರ್ಡ್‍ಗಳ ಮತದಾನ ಕೇಂದ್ರಗಲ್ಲಿ ಒಟ್ಟು 1066 ಮತಯಂತ್ರ (ಇವಿಎಂ) ಗಳನ್ನು ಬಳಕೆ ಮಾಡುತ್ತಿದ್ದು, ಶೇಕಡ 20ರಷ್ಟು ಇವಿಎಂಗಳನ್ನು ಮೀಸಲಿರಿಸಲಾಗಿದೆ.

645 ಪಿಆರ್‍ಓಗಳು, 645 ಎಪಿಆರ್‍ಓ ಗಳು ಸೇರಿ ಒಟ್ಟು 2570 ಸಿಬ್ಬಂದಿಗಳನ್ನು ಚುನಾವಣೆಗಾಗಿ ನಿಯೋಜಿಸಲಾಗಿದೆ. ಇದರಲ್ಲಿ ಹೆಚ್ಚುವರಿಯಾಗಿ ಶೇಕಡ 20 ರಷ್ಟು ಸಿಬ್ಬಂದಿಯನ್ನು ಮೀಸಲಿರಿಸಲಾಗಿದೆ.

ಒಟ್ಟು 36 ಪೊಲೀಸ್ ಸೆಕ್ಟರ್‍ಗಳಿದ್ದು, ಇಬ್ಬರು ಡಿಸಿಪಿ, 6 ಎಸಿಪಿ, 17 ಪಿಐ, 15 ಪಿಎಸ್‍ಐ, 62 ಎಎಸ್‍ಐ, 75 ಹೆಡ್ ಕಾನ್ಸ್‍ಸ್ಟೇಬಲ್, 494 ಪೊಲೀಸ್ ಕಾನ್ಸ್ಟೇಬಲ್, 482 ಹೋಂ ಗಾರ್ಡ್‍ಗಳನ್ನು ನಿಯೋಜಿಸಲಾಗಿದ್ದು, 500 ಜನ ಪೊಲೀಸ್ ಕಾನ್ಸ್‍ಸ್ಟೇಬಲ್ಸ್ ಹಾಗೂ 200 ಜನ ಹೋಮ್‍ಗಾಡ್ಸ್‍ಗಳನ್ನು ಹೊರ ಜಿಲ್ಲೆಗಳಿಂದ ಕರೆಸಲಾಗಿದೆ. ಒಟ್ಟಾರೆ 1118 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದು, ಪರಿಸ್ಥಿತಿಗನುಗುಣವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420