ಶಹಾಬಾದ: ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನೀಡಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಎಸೆಯದೇ ಕಸ ಸಂಗ್ರಹ ಮಾಡುವ ವಾಹನ ಬಂದಾಗ ನೀಡಬೇಕು ಎಂದು ನಗರಸಭೆಯ ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ ಹೇಳಿದರು.
ಅವರು ನಗರಸಭೆಯ ಕಾರ್ಯಾಲಯ ಮತ್ತು ಸಾಮ್ರಾಟ ಅಶೋಕ ಚಾರಿಟೇಬಲ್ ಟ್ರಸ್ಟ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಯ ಅಡಿಯಲ್ಲಿ ಬೀದಿ ನಾಟಕ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದ ಸ್ವಚ್ಚತೆ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದೆ ಬರಬೇಕು. ಸ್ವಚ್ಛ ಭಾರತ ಅಭಿಯಾನವೂ ಸ್ವಚ್ಛತೆಗೆ ಮಾತ್ರ ಸಿಮೀತವಾಗದೇ ನಗರದ ಸಮಗ್ರ ಅಭಿವೃದ್ಧಿಗೂ ಪ್ರೇರಣೆಯಾಗಬೇಕು. ನಗರಸಭೆಯಿಂದ ನಿಮ್ಮ ಮನೆಯ ಮುಂದೆ ಕಸ ಸಂಗ್ರಹ ಮಾಡುವ ವಾಹನ ವ್ಯವಸ್ಥೆ ಮಾಡಿದ್ದಾರೆ.ಕಸವನ್ನು ಮನೆಯ ಮುಂದೆ, ಚರಂಡಿಗಳಲ್ಲಿ ಎಸೆಯುವುದರಿಂದ ರೋಗಗಳ ತಾಣವಾಗಿ ಮಾರ್ಪಟ್ಟು ನಮ್ಮ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಹೇಳಿದರು.
ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ನಗರದ ಸ್ವಚ್ಚತೆಗೆ ಆದ್ಯತೆ ನೀಡುವ ಮೂಲಕ ರಾಷ್ಟ್ರಪಿತ ಗಾಂಧೀಜಿ ಅವರು ಕಂಡ ಕನಸನ್ನು ನನಸು ಮಾಡಲು ಮುಂದೆ ಬರಬೇಕೆಂದು ಇದೇ ಸಂದರ್ಭದಲ್ಲಿ ಓಂ ಸಾಯಿ ಕಲಾ ತಂಡದಿಂದ ಶೌಚಾಲಯ ಬಳಕೆ, ಒಣಕಸ-ಹಸಿ ಕಸ,ಪ್ಲಾಸ್ಟಿಕ್ ಬಳಕೆಯ ಹಾನಿ, ಸರಾಯಿಯಿಂದಾಗುವ ತೊಂದರೆ ಇತರ ವಿಷಯಗಳ ಕುರಿತು ನಗರದ ಜನರಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.
ನೈರ್ಮಲ್ಯ ನಿರೀಕ್ಷಕ ಶಿವರಾಜಕುಮಾರ, ಸಾಮ್ರಾಟ ಅಶೋಕ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಯಲ್ಲಪ್ಪ ಮ್ಯಾಕೇರಿ, ಅರುಣ ಜಾಯಿ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…