ಚುನಾವಣೆ ತೊಡಗಿಸಿಕೊಂಡ ಆಶಾ ಕಾರ್ಯಕರ್ತೆಯರ ಖರ್ಚು, ವೆಚ್ಚ ನೀಡಲು ಮನವಿ

0
141

ಕಲಬುರಗಿ: ಚುನಾವಣೆ ಕಾರ್ಯ ಚಟುವಟಿಕೆಯಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರ ಖರ್ಚು, ವೆಚ್ಚ ಹಾಗೂ ಭತ್ಯೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.

ಈ ಮೊದಲು ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಪಂಚಾಯತಿ ಚುನಾವಣೆ ಹಾಗೂ ಇನ್ನಿತರ ಚುನಾವಣೆಗಳಲ್ಲಿಯೂ ಹಾಗೂ ಶಾಲಾ ಕಾಲೇಜುಗಳ ಪರೀಕ್ಷೆಗಳಲ್ಲಿ ಕೆಲಸಕ್ಕೆ ನಿಯೋಜಿಸಿದಾಗಲೂ ಸಹ ಇದೆ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ಆದ್ದರಿಂದ ಇಲಾಖೇತರ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರಿಗೆ ಸೂಕ್ತವಾಗಿ ಖರ್ಚು-ವೆಚ್ಚಗಳ ಭತ್ಯೆಯನ್ನು ನೀಡಿಲ್ಲ.

Contact Your\'s Advertisement; 9902492681

ಆಶಾಗಳ ಇತರ ಬೇಡಿಕೆಗಳ ಬಗ್ಗೆ ಹಲವಾರು ಬಾರಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದಲೂ ನೂರಾರು ಜನ ಆಶಾ ಕಾರ್ಯಕರ್ತೆಯರು ಮಾನ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ದೇಶನದಂದೆ ಕಾರ್ಯ ನಿರ್ವಹಿಸಿದ್ದಾರೆ.

ಇವರು ದೂರದ ಹಳ್ಳಿಗಳಿಂದ ತಮ್ಮ ಸ್ವಂತ ಹಣದಲ್ಲಿ ಸಾರಿಗೆ ವೆಚ್ಚ ಭರಿಸಿದ್ದಾರೆ. ನಗರಕ್ಕೆ ಬಂದ ನಂತರ ಆಟೋ ಚಾರ್ಜ, ಉಪಹಾರ, ಊಟದ ಸಲುವಾಗಿ ನೂರಾರು ರೂಪಾಯಿ ಖರ್ಚು ಮಾಡಿದ್ದಾರೆ. ಬಹುಪಾಲು ಆಶಾ ಕಾರ್ಯಕರ್ತೆಯರು ಒಂದು ದಿನ ಮುಂಚೆ ರಾತ್ರಿಯೇ ಕಲಬುರಗಿ ನಗರದಲ್ಲಿ ಬಂದು ತಂಗಿದ್ದಾರೆ. ಆದರೆ ಅವರಿಗೆ ಇಲಾಖೆಯಿಂದಾಗಲಿ ಅಥವಾ ಚುನಾವಣಾಧಿಕಾರಿಗಳಿಂದಾಗಲಿ ಸೌಲಭ್ಯ ಸಹಕಾರ ಸಿಗಲಿಲ್ಲ ಎಂದು ತಿಳಿಸಿ, ಖರ್ಚು ಮಾಡಿದ ಆಶಾ ಕಾರ್ಯಾಕರ್ತೆಯರ ಖರ್ಚು, ವೆಚ್ಚ ಹಾಗೂ ಭತ್ಯೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿ.ಜಿ ದೇಸಾಯಿ, ಜಯಶ್ರೀ ಸೇರಿದಂತೆ ಹಲವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here