ಬಿಸಿ ಬಿಸಿ ಸುದ್ದಿ

9 ದಿನ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅನುಮತಿಗೆ ಜೈಕರವೇ ಒತ್ತಾಯ

ಕಲಬುರಗಿ: ದೇಶದಲ್ಲಿ ಗಣೇಶ ಉತ್ಸವಕ್ಕೆ ಸುಮಾರು ೨೦೦ ವರ್ಷಗಳ ಇತಿಹಾಸವಿದ್ದು, ಇದು ಹಿಂದೂ ಧರ್ಮದ ದೊಡ್ಡ ಹಬ್ಬ, ಬ್ರಿಟಿಷರ ವಿರುದ್ಧ ಸಂಘಟನೆಗಾಗಿ ಬಾಲಗಂಗಾಧರ ತಿಲಕ ಅವರು ಸಾರ್ವಜನಿಕವಾಗಿ ಗಣೇಶ ವಿಗ್ರಹ ಪ್ರತಿಷ್ಠಾನೆಗೆ ಚಾಲನೆ ನೀಡಿದ್ದು, ಇದೊಂದು ಸಾರ್ವಜನಿಕ ಹಬ್ಬವಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕವಾಗಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸಚೀನ್ ಪರತಾಬಾದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕವಾಗಿ ಶ್ರೀ ಗಣೇಶನ ಮೂರ್ತಿಯನ್ನು ೩, ೫ ಮತ್ತು ೯ ದಿನಗಳ ಕಾಲ ಕೂಡಿಸಿ ನಂತರ ಕೊನೆಯಲ್ಲಿ ಮೂರ್ತಿಯನ್ನು ಮೆರವಣಿಗೆ ಮೂಲಕ ವಿಸರ್ಜನೆಗೆ ಒಯ್ಯುವುದು ರೂಢಿಯಲ್ಲಿದೆ ಈ ಹಿನ್ನೆಲೆಯಲ್ಲಿ ಈ ಹಬ್ಬಕ್ಕೆ ಸರಕಾರ ಹಬ್ಬಕ್ಕೆ ಅಡೆ ತಡೆ ಮಾಡದೇ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮಹಾಮಾರಿ ಭಯಾನಕ ಸೋಂಕು ಕರೋನಾ ದಿಂದಾಗಿ ಗಣೇಶ ಉತ್ಸವಕ್ಕೆ ರಾಜ್ಯ ಸರಕಾರ ಅನುಮತಿ ಕೊಡುತ್ತಿಲ್ಲ. ಆದರೆ ಈಗ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳು ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ದಿನಕ್ಕೆ ಒಂದೇರಡು ಪ್ರಕರಣಗಳು ಹೊಸ ಪ್ರಕರಣಗಳು ಬರುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಕರೋನಾ ಮುಕ್ತವಾದಂತಾಗಿದೆ.  ಅದರಲ್ಲಿಯೂ ಕೂಡ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕರೋನಾ ಸಂಪೂರ್ಣ ಇಳಿಮುಖವಾಗಿದೆ. ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಕೂಡಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿ ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸುತ್ತಾರೆ ಎಂದು ಸಚಿನ ಪರತಾಬಾದ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

25 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago