ಬಿಸಿ ಬಿಸಿ ಸುದ್ದಿ

ನಿಂಬರಗಾದಲ್ಲಿ ನಾಗರಿಕ ಸೌಲಭ್ಯ ಮಾಸಾಶನ, ಬಾಂಡ್ ವಿತರಣೆ

ಆಳಂದ: ಪ್ರತಿಯೊಂದು ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಬೇಕಾದರೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ನಾಗರಿಕರ ಮಧ್ಯ ಸಮನ್ವತೆ ಸಾಧಿಸಿಕೊಂಡರೆ ಮಾತ್ರ ಯೋಜನೆಗಳ ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇವ ವಡಗಾಂವ ಅವರು ಹೇಳಿದರು.

ತಾಲೂಕಿನ ಹೋಬಳಿ ಕೇಂದ್ರ ನಿಂಬರಗಾ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಆಡಳಿತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ಯೋಜನೆಗಳ ಜಾಗೃತಿ ಸರಣಿ ೩ನೇ ಅಭಿಯಾನ ಹಾಗೂ ಕೊರೊನಾ ಮುಂಜಾಗೃತೆ ಅರಿವು ನೆರವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನ ಸಾಮಾನ್ಯರಿಗೆ, ಬಡವರಿಗೆ, ದರ್ಬಲವರ್ಗದವರಿಗೆ ಕೃಷಿ, ಕಟ್ಟಡ ಕಾರ್ಮಿಕರಿಗೆ ವೃಯೋದ್ಧರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಮತ್ತು ರೈತರಿಗೆ ಸಂಬಂಧಿತ ಇಲಾಖೆಯ ಮೂಲಕ ಸರ್ಕಾರ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಜನರು ಸಹ ಜಾಗೃತರಾಗಿ ತಮ್ಮ ಹಕ್ಕು, ಸೌಲಭ್ಯಗಳನ್ನು ಪಡೆಯಲು ಮುಂದಾರೆ ಮಾತ್ರ ಸರ್ಕಾರದ ಯೋಜನೆಗಳು ಸಾರ್ಥಕವಾಗುತ್ತವೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಸಾತಪ್ಪ ಜಿ. ಮಂಟಗಿ ಅವರು ಕನ್ನಡ ಪುಸ್ತಕ ವಿತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅಲ್ಲದೆ, ಫಲಾನುಭವಿಗಳಿಗೆ ಕಂದಾಯ ಇಲಾಖೆಯ ಮಾಸಾಶನ ಹಾಗೂ ಭಾಗ್ಯಲಕ್ಷ್ಮೀ ಬಾಂಡ್‌ಗಳನ್ನು ವಿತರಿಸಿ ಮಾತನಾಡಿ, ಇದೊಂದು ಮಾದರಿಯ ಕಾರ್ಯಕ್ರಮವಾಗಿದೆ. ಇಂಥ ಕಾರ್ಯಕ್ರಮದ ಮೂಲಕ ಜನ ಸಾಮಾನ್ಯರಿಗೆ ಅರಿವು ಮೂಡಿಸುತ್ತಿರುವ ಪತ್ರಕರ್ತರ ಸಂಘದ ಕಾರ್ಯ ಶ್ಲಾಘನಿಯವಾಗಿದೆ. ಗ್ರಾಪಂ ಆಡಳಿತದಲ್ಲೂ ಸಾಕಷ್ಟು ಸುಧಾರಣೆ ತರಲು ಮುಂದಾಗಿದ್ದು ನಾಗರಿಕರ ಸಹಕಾರ ನೀಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಾಡ ತಹಸೀಲ್ದಾರ ಮಹೇಶೆ, ಕಂದಾಯ ನಿರೀಕ್ಷಕ ಅನೀಲ, ಗ್ರಾಪಂ ಸದಸ್ಯರಾದ ಕಾರ್ತಿಕ ಎಂ. ಕುಂಬಾರ, ರಾಜು ಚವ್ಹಾಣ, ಮೋಹನ ನಿರ್ಮಲಕರ್, ಮುಖಂಡ ಸೋಮಣ್ಣಾ ನಾಗೂರೆ, ಸೂರ್ಯಕಾಂತ ಜಿಡಗಿ, ಪತ್ರಕರ್ತ ಜಗದೀಶ ಕೋರೆ, ಮಲ್ಲಿಕಾರ್ಜುನ ಪಗಡೆ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

ರೇಷ್ಮೆ ಇಲಾಖೆಯ ತಾಲೂಕು ಅಧಿಕಾರಿ ಡಿ.ಬಿ. ಪಾಟೀಲ, ತೋಟಗಾರಿಕೆ ಹಿರಿಯ ಅಧಿಕಾರಿ ಶಂಕರಗೌಡ, ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಹಿರೇಮಠ, ಶಿಕ್ಷಣ ಇಲಾಖೆಯ ಅಧಿಕಾರಿ ಅಶೋಕ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಷಾ ಪಾಟೀಲ, ವಿಎ ಬಸವರಾಜ ಖಂಡಾಳೆ ಸೇರಿ ಇನ್ನಿತರ ಅಧಿಕಾರಿಗಳು ತಮ್ಮ ಇಲಾಖೆಯ ನಾಗರಿಕ ಸೌಲಭ್ಯದ ಮಾಹಿತಿ ಹಂಚಿಕೊಂಡರು.

ಬಿಲ್ ಕಲೆಕ್ಟರ್ ಕಲ್ಯಾಣಿ ನಿರ್ಮೂಲಕರ್ ನಿರೂಪಿಸಿದರು. ಪತ್ರಕರ್ತ ಅರ್ಜುನ ಬಂಡೆ ಸ್ವಾಗತಿಸಿದರು. ಪತ್ರಕರ್ತರ ಪ್ರಭಾಕರ ಸಲಗರೆ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ಜಿ. ಯಳಸಂಗಿ ವಂದಿಸಿದರು. ಸೆ. ೧೩ರಂದು ಆಳಂದ ತಾಪಂ ಕಚೇರಿಯಲ್ಲಿ ಜಾಗೃತಿ ಸರಣಿ ಅಭಿಯಾನ ನಡೆಯಲಿದೆ.

ಮಾದರಿ ಕಾರ್ಯ: ಇತಿಹಾಸದಲ್ಲೇ ಪತ್ರಕರ್ತರ ಸಂಘ, ತಾಲೂಕು ಆಡಳಿತದಿಂದ ಜನರಿಗೆ ಯೋಜನೆಗಳ ಮಾಹಿತಿ ಒದಗಿಸಿ ಸೌಲಭ್ಯಗಳ ಒದಗಿಸುವುದು ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಘೋಷಣೆಯಂತೆ ಕಾರ್ಯಕ್ರಮ ಆಡಂಬರವಿಲ್ಲದೆ, ಬರೀ ಪುಸ್ತಕ ವಿತರಣೆ, ಕೊರೊನಾ ಜಾಗೃತಿಯಂತ ಸರಳ ರೀತಿಯಂತ ಅರ್ಥಪೂರ್ಣ ಕಾರ್ಯಕ್ರಮ ಆಚರಣೆ ಇದು ರಾಜ್ಯಕ್ಕೆ ಮಾದರಿಯಾಗಿದೆ. – ಬಸವರಾಜ ಯಳಸಂಗಿ ಯುವ ಮುಖಂಡ ನಿಂಬರಗಾ

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

2 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago