ಸುರಪುರ ತಾಲೂಕಿನಾದ್ಯಂತ ಆರಂಭಗೊಂಡ ಶಾಲೆಗಳು: ಮಕ್ಕಳಿಗೆ ಹೂಗುಚ್ಛ ನೀಡಿ ಸ್ವಾಗತ

ಸುರಪುರ: ಸರಕಾರದ ಆದೇಶದಂತೆ ತಾಲೂಕಿನಾದ್ಯಂತ ಸೋಮವಾರ ಬೆಳಿಗ್ಗೆ ೬ ಮತ್ತು ೭ನೇ ತರಗತಿ ಶಾಲೆಗಳು ಆರಂಭಗೊಂಡಿದ್ದು ಬಹುತೇಕ ಶಾಲೆಗಳಲ್ಲಿ ಮಕ್ಕಳಿಗೆ ವಿಶೇಷವಾಗಿ ಬರಮಾಡಿಕೊಳ್ಳಲಾಗಿದೆ.

ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಬೆಳಿಗ್ಗೆ ಆಗಮಿಸಿದ ಮಕ್ಕಳಿಗೆ ಶಾಲಾ ಸುಧಾರಣಾ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿಶ್ವನಾಥರಡ್ಡಿ ಕಾಮತ್ ಮತ್ತಿತರೆ ಮುಖಂಡರು ಹಾಗು ಶಿಕ್ಷಕರಾದ ಮಲ್ಲಿನಾಥ ಮತ್ತು ರಂಗನಾಥ ಅವರು ಮಕ್ಕಳಿಗೆ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು.ಅಲ್ಲದೆ ಎಲ್ಲಾ ಮಕ್ಕಳಿಗೆ ಥರ್ಮಲ ಸ್ಕ್ಯಾನಿಂಗ್ ಮಾಡಲಾಯಿತು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳುವಂತೆ ತಿಳಿಸಿದರು.

ಅದೇರೀತಿಯಾಗಿ ತಾಲೂಕಿನ ತಿಂಥಣಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳಿಗ್ಗೆ ಮಕ್ಕಳು ಆಗಮಿಸುತ್ತಿದ್ದಂತೆ ಎಸ್ಡಿಎಮ್‌ಸಿ ಅಧ್ಯಕ್ಷ ಮಾನಪ್ಪ ಯರಡೋಣಿ ಮಕ್ಕಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.ಶಾಲೆಯ ಮುಖ್ಯಗುರು ಮಹಾಂತಪ್ಪ ಎಲ್ಲಾ ಮಕ್ಕಳಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಿದರು.ಈ ಸಂದರ್ಭದಲ್ಲಿ ಎಪಿಎಮ್‌ಸಿ ಸದಸ್ಯ ಖಾಜಾಸಾಬ್ ಗುಂತಗೋಳ,ಮುಖಂಡರಾದ ಗಂಗಾಧರ ನಾಯಕ್,ಗ್ರಾ.ಪಂ ಸದಸ್ಯ ಬಾಬು ಹವಲ್ದಾರ್,ಹನುಮಂತ ದೊಡ್ಮನಿ,ಮೈಬೂಬ ಮುಲ್ಲಾ,ಮೌನೇಶ ಕುರ್ಲಿ,ಮೌನೇಶ ಇತರರಿದ್ದರು.

ನಗರದ ಖುರೇಶಿ ಮೊಹಲ್ಲಾದಲ್ಲಿ ಮುಖ್ಯಗುರು ಸ್ಯಾಮುವೆಲ್ ಅವರು ಎಲ್ಲಾ ಮಕ್ಕಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.ಅಲ್ಲದೆ ಎಲ್ಲಾ ಮಕ್ಕಳಿಗೆ ಪುಷ್ಪವೃಷ್ಠಿ ನಡೆಸುವ ಜೊತೆಗೆ ಶಿಕ್ಷಕರು ಮಕ್ಕಳಿಗೆ ದಿನಾಲು ಕಡ್ಡಾಯವಾಗಿ ಮಾಸ್ಕ್ ಧರಿಸಿ ಶಾಲೆಗೆ ಬರುವಂತೆ ಜಾಗೃತಿ ಮೂಡಿಸಿದರು.

ತಾಲೂಕಿನ ದೇವಿಕೆರಾ,ಬಿಜಾಸಪುರ,ಸತ್ಯಂಪೇಟೆ,ದೀವಳಗುಡ್ಡ,ಬಾದ್ಯಾಪುರ ಹಾಗು ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಆಗಮನಕ್ಕಾಗಿ ಸ್ವಾಗತದ ಬ್ಯಾನರ್‌ಗಳನ್ನು ಹಾಕಿ ಜೊತೆಗೆ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಶಾಲೆಯ ಶಿಕ್ಷಕರು ಮತ್ತು ಗ್ರಾಮದ ಮುಖಂಡರು ಬರಮಾಡಿಕೊಂಡರು.ಮೊದಲ ದಿನವೇ ವಿದ್ಯಾರ್ಥಿಗಳು ಹೆಚ್ಚೆಚ್ಚು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದು ಕಂಡುಬಂತು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420