ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಶಾಂತಿಸಭೆ

ಶಹಾಬಾದ: ಗಣೇಶ ಉತ್ಸವದ ವೇಳೆ ಪಟಾಕಿ ಸಿಡಿಸುವುದು, ಗುಲಾಲು ಎರೆಚುವುದು ಹಾಗೂ ಡಿಜೆ ಹಚ್ಚುವುದನ್ನು ನಿಷೇದಿಸಲಾಗಿದ್ದು, ಒಂದು ವೇಳೆ ಕಂಡು ಬಂದರೆ ಕಾನೂನು ಕ್ರಮಕ್ಕೆ ಮುಂದಾಗಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಮಂಗಳವಾರ ನಗರದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಆಯೋಜಿಸಲಾದ ಶಾಂತಿಸಭೆಯಲ್ಲಿ ಮಾತನಾಡಿದರು.

ಗಣೇಶ ಹಬ್ಬಗಳನ್ನು ನಾವೆಲ್ಲರೂ ಸಂತೋಷದಿಂದ ಆಚರಿಸಬೇಕೆಂಬುದು ನಿಜ.ಆದರೆ ಈ ಉತ್ಸವಗಳು ಬದುಕಿಗೆ ಮಾರಕವಾಗಬಾರದು. ಆದ್ದರಿಂದ ಈ ಬಾರಿ ಗಣೇಶ ಹಬ್ಬದಲ್ಲಿ ೪ಅಡಿಗಿಂತ ಎತ್ತರದ ಮೂರ್ತಿಗಳನ್ನು ಕೂಡಿಸುವುದಕ್ಕೆ ಅವಕಾಶವಿಲ್ಲ.ಅಲ್ಲದೇ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಕೂಡಿಸಬೇಕು. ಗಣೇಶನ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಾಗೂ ಮೆರವಣಿಗೆ ಮಾಡುವಂತಿಲ್ಲ. ಐದು ದಿನಗಳಿಗೆ ಮಾತ್ರ ಕೂಡಿಸಲು ಅವಕಾಶ ನೀಡಲಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕೆಂದು ಹೇಳಿದರು.

ಡಿವಾಯ್‌ಎಸ್‌ಪಿ ಉಮೇಶ ಚಿಕ್ಕಮಠ ಮಾತನಾಡಿ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಬಯಸುವವರು ಸ್ಥಳೀಯ ತಾಲೂಕಾಡಳಿತ,ನಗರಸಭೆ ಹಾಗೂ ಪೊಲೀಸ್ ಇಲಾಖೆಯಿಂದ ಪೂರ್ವ ಅನುಮತಿ ಪಡೆಯತಕ್ಕದ್ದು. ಯಾವುದೇ ಕಾರಣಕ್ಕೂ ಸರ್ಕಾರದ ಆದೇಶವನ್ನು ಉಲ್ಲಂಗಿಸಬಾರದು. ಒಂದು ವೇಳೆ ಉಲ್ಲಂಘಿಸಿದರೇ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಪೌರಾಯುಕ್ತ ಕೆ.ಗುರಲಿಂಗಪ್ಪ ಮಾತನಾಡಿ, ಸರ್ಕಾರದ ಮಾರ್ಗಸೂಚಿಗಳನ್ನು ಅರಿತುಕೊಂಡು ಗಣೇಶ ಹಬ್ಬವನ್ನು ಆದಷ್ಟು ಸರಳವಾಗಿ ಆಚರಿಸಿ.ಯಾವುದೇ ಕಾರಣಕ್ಕೂ ಜನಸಂದಣಿಯಾಗದಂತೆ ನೋಡಿಕೊಳ್ಳಿ.ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಹೇಳಿದರು.

ಪಿಐ ಸಂತೋಷ ಹಳ್ಳೂರ್ ಮಾತನಾಡಿ, ಸಾರ್ವಜನಕವಾಗಿ ರಸ್ತೆಗಳಲ್ಲಿ ನಿಂತು ವಾಹನಗಳನ್ನು ತಡೆದು ಹೆದರಿಸುವ ಮೂಲಕ ಚಂದಾ ವಸೂಲಿ ಮಾಡುವಂತಿಲ್ಲ.ಪೊಲೀಸ್ ಮುಕ್ತ ಹಬ್ಬಗಳ ಆಚರಣೆಯಾದಾಗ ಮಾತ್ರ ಕೋಮು ಸೌಹಾರ್ದತೆಗೆ ಅರ್ಥ ಬರುತ್ತದೆ.ಅಲ್ಲದೇ ಇನ್ನೊಬ್ಬರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಆಚರಣೆಗಳಾಗಬಾರದೆಂದು ಹೇಳಿದರಲ್ಲದೇ, ಸರ್ಕಾರದ ಆದೇಶವನ್ನು ಓದಿ ಹೇಳಿದರು. ಪ್ರೋಬೆಷನರಿ ಡಿವಾಯ್‌ಎಸ್‌ಪಿ ವೀರಯ್ಯ ಹಿರೇಮಠ, ಪಿಎಸ್‌ಐಗಳಾದ ಚೇತನ, ಗಂಗಮ್ಮ, ಚೈತ್ರ ವೇದಿಕೆಯ ಮೇಲಿದ್ದರು.

ನಗರದ ಗಣ್ಯರಾದ ಅರುಣ ಪಟ್ಟಣಕರ್, ಡಾ.ರಶೀದ ಮರ್ಚಂಟ್,ಕುಮಾರ ಚವ್ಹಾಣ,ಮೃತ್ಯುಂಜಯ್ ಹಿರೇಮಠ, ನಾಗರಾಜ ಮೇಲಗಿರಿ,ಲೋಹಿತ್ ಕಟ್ಟಿ, ಇನಾಯತಖಾನ ಜಮಾದಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420