ಶ್ರೀ ರೇಣುಕಾಚಾರ್ಯರ ಜಯಂತಿ ಸರ್ಕಾರದ ವತಿಯಿಂದ ಆಚರಿಸಲು ಒತ್ತಾಯ

ಕಲಬುರಗಿ: ಮನುಕುಲಕ್ಕೆ ಮಾನವೀಯ ಮೌಲ್ಯಗಳನ್ನು ಬೋಧಿಸಿ ಜನರಲ್ಲಿ ಧರ್ಮ ಪ್ರಜ್ಞೆಯೊಂದಿಗೆ ಧಾರ್ಮಿಕ ಆಚರಣೆಗಳನ್ನು ಸಾರಿದ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಸರ್ಕಾರದ ವತಿಯಿಂದ ಆಚರಣೆ ಮಾಡುವಂತೆ ಜಗದ್ಗುರು ಶ್ರೀ ರೇಣುಕಾಚಾರ್ಯ ಸದ್ಭಕ್ತ ಮಂಡಳಿಯ ಪದಾಧಿಕಾರಿಗಳು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನೀಲಕುಮಾರ ರವರಿಗೆ ನಿಯೋಗದ ಮೂಲಕ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ವಿಶ್ವ ಬಂಧುತ್ವದ ವೀರಶೈವ ಧರ್ಮವನ್ನು ಸ್ಥಾಪಿಸಿ ಪ್ರಾಚೀನ ಗ್ರಂಥವಾದ ಸಿದ್ಧಾಂತ ಶಿಖಾಮಣಿಯನ್ನು ಜನತೆಗೆ ಧಾರೆಯೆರೆದು ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಬೋಧಿಸಿದ ಜಗದ್ಗುರು ಶ್ರೀ ರೇಣುಕಾಚಾರ್ಯರ ಮೌಲ್ಯಗಳು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಆಗಬೇಕಾಗಿರುವುದರಿಂದ ಸರಕಾರದ ವತಿಯಿಂದ ಜಯಂತಿ ಆಚರಣೆ ಮಾಡುವುದು ಅತ್ಯವಶ್ಯವಾಗಿದೆ ಎಂದು ಸದ್ಭಕ್ತ ಮಂಡಳಿ  ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಜಗದ್ಗುರು ಶ್ರೀ ರೇಣುಕಾಚಾರ್ಯರ ಸರ್ಕಾರದ ವತಿಯಿಂದ ಆಚರಣೆ ಮಾಡುವ ದಿಶೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಭಾರತೀಯ ಜನತಾ ಪಕ್ಷದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ ರದ್ದೇವಾಡಗಿ ಸದ್ಭಕ್ತ ಮಂಡಳಿಯ ಗೌರವ ಅಧ್ಯಕ್ಷರಾದ ಅನೀಲಕುಮಾರ ಜಮಾದಾರ, ಅಧ್ಯಕ್ಷರಾದ ಡಾ: ಅಣವೀರಯ್ಯ ಪ್ಯಾಟಿಮನಿ, ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಾಗಲಿಂಗಯ್ಯ ಮಠಪತಿ, ಮಂಡಳಿಯ ಪದಾಧಿಕಾರಿಗಳಾದ ಬಸವರಾಜ ಕೋಲ್ಕುಂದಿ, ಶಂಭುಲಿಂಗ ಕಡಗಂಚಿ, ಬಸವರಾಜ ಚಿತಲಿ, ಸಿದ್ರಾಮಯ್ಯ ಹಿರೇಮಠ, ಶಿವರಾಜ ಪ್ಯಾಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420