ಸುರಪುರ: ನಗರದ ಪೊಲೀಸ್ ಠಾಣೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾನಸಿಕ ಒತ್ತಡ ನಿಯಂತ್ರಣ ಕುರಿತು ತರಬೇತಿ ಕಾರ್ಯಕ್ರಮ ನಡೆಸಲಾಯಿತು.ಜಿಲ್ಲಾ ಪಂಚಾಯತಿ ಯಾದಗಿರಿ ಮತ್ತು ಜಿಲ್ಲಾ ಆರೋಗ್ಯ ಸಂಘ (ಮಾನಸಿಕ ವಿಭಾಗ) ಯಾದಗಿರಿ ವತಿಯಿಂದ ಸುರಪುರ ನಗರ ಆರೋಗ್ಯ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಭೆಯ ನೇತೃತ್ವವನ್ನು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿಹೆಚ್ಒ ಅವರು,ದಿನದ ೨೪ ಗಂಟೆಯು ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅನೇಕ ರೀತಿಯ ಮಾನಸಿಕ ಒತ್ತಡಗಳನ್ನು ಅನುಭವಿಸುತ್ತಾರೆ.ಆದ್ದರಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಾನಸಿಕ ಒತ್ತಡ ನಿಯಂತ್ರಣಕ್ಕಾಗಿಯೆ ಸರಕಾರ ತರಬೇತಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಪೊಲೀಸರ ಆರೋಗ್ಯ ರಕ್ಷಣೆಗೆ ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ತರಬೇತಿದಾರರಾಗಿ ಭಾಗವಹಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಶೀಬಾರಾಣಿ ಮಾತನಾಡಿ,ಪೊಲೀಸರು ತಮ್ಮ ಕರ್ತವ್ಯದ ಸಂದರ್ಭದಲ್ಲಿ ಅನೇಕಬಾರಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ.ಅಲ್ಲದೆ ತಮ್ಮ ಕರ್ತವ್ಯದ ಜೊತೆಗೆ ಕುಟುಂಬ ನಿರ್ವಹಣೆ ಹಾಗು ಕೆಲಸದ ಒತ್ತಡದಿಂದ ಮಾನಸಿಕವಾಗಿ ಖಿನ್ನತೆಗೊಳಗಾಗುವ ಸಾಧ್ಯತೆ ಇರುತ್ತದೆ.ಇದನ್ನು ನಿಯಂತ್ರಣ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಲಿದೆ.ಆದ್ದರಿಂದ ಸರಕಾರ ಈಗ ತಮ್ಮೆಲ್ಲರಿಗೂ ತರಬೇತಿಯ ಮೂಲಕ ಮಾನಸಿಕ ನಿಯಂತ್ರಣ ಸಾಧ್ಯತೆ ಇದೆ,ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ಆತ್ಮಹತ್ಯೆಗೆ ಕಾರಣಗಳು ಮತ್ತು ತಡೆಗಟ್ಟಲು ಇರುವ ಮಾರ್ಗೋಪಾಯಗಳ ಕುರಿತು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಪೊಲೀಸ್ ಇಬ್ ಇನ್ಸ್ಪೇಕ್ಟರ್ ಕೃಷ್ಣಾ ಸುಬೇದಾರ ಇದ್ದರು.ಕಾಂiಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ವಿಜಯಲಕ್ಷ್ಮೀ,ಸೀಮೆಯಾನ್,ಗೌಡಪ್ಪಗೌಡ ಸೇರಿದಂತೆ ಅನೇಕ ಜನ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.ಶಿವಶರಣಯ್ಯ ಕಾರ್ಯಕ್ರಮಕ್ಕೆ ಸ್ವಾಗತಿಸಿ ನಿರೂಪಿಸಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…