ಸುರಪುರ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ನಗರದ ತಹಸೀಲ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ಇದೇ ತಿಂಗಳ ೧೭ನೇ ತಾರೀಖು ಸರಕಾರದ ಕೋವಿಡ್ ಮಾರ್ಗಸೂಚಿಗಳ ಅನ್ವಯದಲ್ಲಿ ಸರಳವಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಆಚರಿಸಲಾಗುವುದು ಎಂದರು.ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಿ ನೂರು ಜನ ಒಳಗೊಂಡಂತೆ ಕಾರ್ಯಕ್ರಮವನ್ನು ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಯಾವುದೇ ಮಾಲಾರ್ಪಣೆ ಸನ್ಮಾನ ಇರುವುದಿಲ್ಲ ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರ ನಾಯಕರ ಜೀವನ ಚರಿತ್ರೆಯುಳ್ಳ ಪುಸ್ತಕವನ್ನು ನೀಡಲಾಗುವುದು ಎಂದು ತಿಳಿಸಿದರು.
ಪ್ರತಿಯೊಬ್ಬರೂ ಸರಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಬಾರಿಯ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸುವುದು ಅನಿವಾರ್ಯವಾಗಿದೆ ಕೋವಿಡ್ ಮೂರನೇ ಅಲೆ ಎದುರಾಗುವ ಸಂಭವವಿದ್ದು ಕೇವಲ ನೂರು ಜನರಿಗೆ ಮಾತ್ರ ಅವಕಾಶವಿದೆ ಸೆಪ್ಟೆಂಬರ್ ೧೭ರಂದು ತಾಲೂಕಿನ ಎಲ್ಲಾ ಸರಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು,ಬೆಳಗ್ಗೆ ೮ ಗಂಟೆ ಒಳಗಾಗಿ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಕಚೇರಿಗಳಲ್ಲಿ ಧ್ವಜಾರೋಹಣವನ್ನು ನೆರವೇರಿಸಬೇಕು, ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ ಅಂಥವರ ಮೇಲೆ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ, ಉಪನ್ಯಾಸಕರಾದ ವೇಣುಗೋಪಾಲ ಜೇವರ್ಗಿ, ಮುಖಂಡರಾದ ವಿರುಪಾಕ್ಷಿ ಕೋನಾಳ,ಶಿವಲಿಂಗ ಹಸನಾಪುರ,ತಿಪ್ಪಣ್ಣ ಶೆಳ್ಳಗಿ,ಆರ್.ಐ ಗುರುಬಸಪ್ಪ,ಗೃಹ ರಕ್ಷಕದಳ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್,ವಿವಿಧ ಇಲಾಖೆಗಳ ಅಧಿಕಾರಿಗಳಾದ ಗುರುನಾಥ ಭೂಸನೂರ,ಸಂತೋಷ,ಸಂಗೀತ ಮಾಡ್ಯಾಳ, ಹರೀಶ್ ನಾಯಕ, ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…