ಸುರಪುರ: ನಗರದ ರಂಗಂಪೇಟೆಯ ಖಾದಿ ಕೇಂದ್ರ ಆವರಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಹಾಗೂ ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಬೀದಿ ರಂಗದಿನಾಚರಣೆ ಹಾಗೂ ಸಿ.ಜಿ.ಕೆ ಪ್ರಶಸ್ತಿ ೨೦೨೧ ಪ್ರಧಾನ ಸಮಾರಂಭ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸಗರನಾಡು ಸೇವ ಪ್ರತಿಷ್ಠಾನದ ಮೂಲಕ ಕೊಡಮಾಡುವ ಸಿ.ಜಿ.ಕೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಡೆಸಲಾಯಿತು. ಈ ವರ್ಷದ ಸಿಜಿಕೆ ಪ್ರಶಸ್ತಿಯನ್ನು ರಂಗ ಸಂಘಟಕರಾದ ಬಲಭೀಮನಾಯಕ ಬೈರಿಮಡ್ಡಿ ಅವರಿಗೆ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಕಾಲೇಜಿನ ಪ್ರಾಚಾರ್ಯ ಶಾಂತು ನಾಯಕ, ಕರ್ನಾಟಕ ಜಾನಪದ ಪರಿಷತ್ತು ತಾಲೂಕ ಸಂಘಟನಾ ಕಾರ್ಯದರ್ಶಿ ಶ್ರೀಕಾಂತ ರತ್ತಾಳ, ಜಯ ಕರ್ನಾಟಕ ಸಂಘಟನೆ ತಾಲೂಕ ಅಧ್ಯಕ್ಷ ರವಿನಾಯಕ ಬೈರಿಮಡ್ಡಿ, ಮುಖಂಡ ಧರ್ಮರಾಜ ಬಾದ್ಯಾಪೂರ ವೇದಿಕೆಮೇಲಿದ್ದರು.
ಕಾರ್ಯಕ್ರಮವನ್ನು ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ದೇವರಾಜ ನಂದಗಿರಿ ವಂದಿಸಿದರು.