ಶಹಾಬಾದ:ಕೊಳವೆ ಬಾವಿಯನ್ನು ತೋಡಿಸುವ ಮೂಲಕ ಶಾಸಕ ಬಸವರಾಜ ಮತ್ತಿಮಡು ಅವರು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಸಕುಲತಾ.ಡಿ ಹೇಳಿದರು.
ಅವರು ನಗರದ ಜೆಪಿ ಕಾಲೋನಿಯಲ್ಲಿ ಅಧಿಸೂಚಿತ ಕ್ಷೇತ್ರ ಸಮಿತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈಗಾಗಲೇ ಜೆಪಿ ಕಾಲೋನಿಲ್ಲಿ ಕುಡಿಯುವ ನೀರಿನ ತೊಂದರೆಯಿದೆ.ಈ ಬಗ್ಗೆ ಶಾಸಕ ಬಸವರಾಜ ಮತ್ತಿಮಡು ಅವರ ಗಮನಕ್ಕೆ ತಂದಾಗ, ಶಾಸಕರು ಖುದ್ದಾಗಿ ಕಾಲೋನಿಗೆ ಬೇಟಿ ನೀಡಿ ಅಧಿಸೂಚಿತ ಕ್ಷೇತ್ರ ಸಮಿತಿ ಮುಖ್ಯಾಧಿಕಾರಿಗೆ ಕೊಳವೆ ಬಾವಿ ತೋಡಿಸಿ, ಸಾರ್ವಜನಿಕರಿಗೆ ನೀರಿನ ಅನುಕೂಲ ಮಾಡಿಕೊಡಲು ಹೇಳಿದರು.
ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಸೂಚಿತ ಕ್ಷೇತ್ರ ಸಮಿತಿ ಮುಖ್ಯಾಧಿಕಾರಿ ಪೀರಶೆಟ್ಟಿ ಎರಡು ಕೊಳವೆ ಹಾಕಿದ್ದು, ಎರಡರಲ್ಲಿ ನೀರು ಬಂದಿದೆ.ಇದರಿಂದ ಇಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗಲಿದೆ.ಶಾಸಕರು ತೋರಿದ ಸ್ಪಂದನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಇ ಶಾಂತರೆಡ್ಡಿ ದಂಡಗುಲಕರ್,ಶ್ರೀದೇವಿ, ಮೋನಿಕಾ,ಶಿಲ್ಪಾ.ಜಿ, ಸರಸ್ವತಿ.ಎನ್, ಮಾಲಾ.ಬಿ, ನಾಗುಬಾಯಿ,ಶೋಭಾ, ಕಾವೇರಿ, ಮಲ್ಲಮ್ಮಾ,ರಾಜೇಶ.ಎಸ್, ಲಕ್ಷ್ಮಿಬಾಯಿ, ಉದಯ, ರಫಿಕ್, ಯಲ್ಲಪ್ಪ, ಸಂತೋಷ ಹುಲಿ, ಲಕ್ಷ್ಮಿ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…