ಸುರಪುರ: ಮಹಾನಾಯಕ ಧಾರವಾಹಿ ಪ್ರಸಾರ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ) ಬಣದ ಮುಖಂಡರು ಒತ್ತಾಯಿಸಿದರು.
ನಗರದ ರಂಗಂಪೇಟೆಯಲ್ಲಿನ ಜೆಸ್ಕಾಂ ಕಚೇರಿ ಮುಂದೆ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ,ಝೀ ಕನ್ನಡ ವಾಹಿನಿಯಲ್ಲಿ ದಿನಾಲು ಸಂಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಮಹಾನಾಯಕ ಧಾರವಾಹಿ ಪ್ರಸಾರವಾಗುತ್ತದೆ.
ಈ ಸಂದರ್ಭದಲ್ಲಿ ಪದೆ ಪದೆ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಜನರಿಗೆ ಬೇಸರವಾಗಿದೆ.ಯಾಕೆಂದರೆ ಡಾ: ಬಾಬಾ ಸಾಹೇಬರ ಜೀವನಾದರ್ಶ ಮುಂದಿನ ಪೀಳಿಗೆಗೆ ಉತ್ತಮವಾದ ಸಂದೇಶವಾಗಿದ್ದು ಎಲ್ಲರು ತುಂಬಾ ಆಸಕ್ತಿಯಿಂದ ಧಾರವಾಹಿ ವೀಕ್ಷಿಸಲು ಕಾಯುತ್ತಿರುತ್ತಾರೆ.
ಆದರೆ ವಿದ್ಯುತ್ ಸಮಸ್ಯೆಯಿಂದ ಜನರಿಗೆ ತೀವ್ರ ನಿರಾಸೆಯಾಗುತ್ತಿದೆ.ಆದ್ದರಿಂದ ನಿತ್ಯವು ಸಂಜೆ 6 ರಿಂದ 7 ಗಂಟೆಯ ವರೆಗೆ ವಿದ್ಯುತ್ ಕಡಿತ ಮಾಡಬೇಡಿ ಎಂದು ಮನವಿ ಮಾಡುತ್ತೇವೆ.ನಮ್ಮ ಮನವಿಯನ್ನು ನಿರ್ಲಕ್ಷಿಸಿದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಂತರ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಬರೆದ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ತಾಲೂಕು ಸಂಚಾಲಕ ವೀರಭದ್ರಪ್ಪ ದೊಡ್ಮನಿ ತಳವಾರಗೇರಾ ಮುಖಂಡರಾದ ತಿಪ್ಪಣ್ಣ ಶೆಳ್ಳಗಿ ರಮೇಶ ಬಡಿಗೇರ ಬಾಚಿಮಟ್ಟಿ ಮರಲಿಂಗ ಹುಣಸಿಹೊಳೆ ಖಾಜಾ ಅಜ್ಮೀರ ಮಾನಪ್ಪ ಶೆಳ್ಳಗಿ ಎಮ್ ಪಟೇಲ್ ಪಾರಪ್ಪ ದೇವತ್ಕಲ್ ಹುಸನಪ್ಪ ತಳವಾರ ಭೀಮರಾಯ ಮಂಗಳೂರ ಮಲ್ಲಪ್ಪ ದೊಡ್ಮನಿ ಇತರರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…