ಮರಡಿ ಮಲ್ಲಿಕಾರ್ಜುನ ಜಾತ್ರೆ ರದ್ದು: ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ

0
10

ಸುರಪುರ: ರಾಜ್ಯದಲ್ಲಿ ಕೋವಿಡ್ ನಿಯಮಗಳು ಜಾರಿಯಿರುವ ಕಾರಣದಿಂದ ಲಕ್ಷ್ಮೀಪುರ ಶ್ರೀಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವವನ್ನು ರದ್ದು ಮಾಡಿರುವುದಾಗಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.

ಇದೇ 13ನೇ ತಾರೀಖು ಸೋಮವಾರ ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಗೊಳಿಸಲಾಗಿದೆ.ಸರಕಾರ ಯಾವುದೇ ಜಾತ್ರೆ ಸಮಾರಂಭಗಳನ್ನು ನಿಷೇಧಿಸಿ ಆದೇಶ ಹೊರಡಿಸೊರುವ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವನ್ನು ಅರ್ಚಕರು ನಡೆಸಲು ಮಾತ್ರ ಅವಕಾಶ ನೀಡಲಾಗುವುದು,ಆದರೆ ಯಾವುದೇ ರೀತಿಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುವಂತಿಲ್ಲ,ಆಟಿಕೆ,ತಿನಿಸು ಮತ್ತಿತರೆ ವಸ್ತುಗಳ ಮಾರಾಟದ ಅಂಗಡಿಗಳನ್ನು ಹಾಕುವಂತಿಲ್ಲ.ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here