ಧಾರವಾಡ: ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನೂತನವಾಗಿ ತೆರೆಯಲಾಗಿರುವ “ಸಾಮಾನ್ಯ ಸೇವಾ ಕೇಂದ್ರ”ವನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಶನಿವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ರೈತಾಪಿ ಜನರು ಪಹಣಿ ಪತ್ರ ಪಡೆಯುವುದಕ್ಕಾಗಿ ಹಾಗೂ ಬೆಳೆ ವಿಮೆ ಪಾವತಿಸುವುದಕ್ಕಾಗಿ ನಗರ ಪ್ರದೇಶಕ್ಕೆ ತೆರಳುವುದರಿಂದ ಸಮಯ ವ್ಯರ್ಥವಾಗುವುದರ ಜತೆಗೆ ಹೆಚ್ಚಿನ ಖರ್ಚು ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳ್ಳಿಗಳಲ್ಲಿ ಇಂಥಹ ಸಾಮಾನ್ಯ ಸೇವಾ ಕೇಂದ್ರಗಳು ಕಾರ್ಯಾರಂಭ ಮಾಡುವುದರಿಂದ ಗ್ರಾಮೀಣರಿಗೆ ಆಗುತ್ತಿದ್ದ ಹೊರೆ ಕಡಿಮೆ ಆಗುತ್ತದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಸಕ ಅಮೃತ ದೇಸಾಯಿ, ಬಿಜೆಪಿ ಮುಖಂಡರಾದ ತವನಪ್ಪ ಅಷ್ಟಗಿ, ಬಸವರಾಜ ಜೀವಣ್ಣವರ, ಜಿಲ್ಲಾ ವ್ಯವಸ್ಥಾಪಕ ಪ್ರವೀಣ್ ನವಲಗುಂದ, ಸಿ.ಎಸ್.ಸಿ ವೆಲ್ಫೇರ್ ಸೊಸೈಟಿ ಅಧ್ಯಕ್ಷ ಶೋಭಾ ಹಂಚಾಟೆ, ಉಪಾಧ್ಯಕ್ಷ ದಯಾನಂದ ತೋಟಗಿ, ವಾಸುದೇವ ಸುರಕೋಡ, ವಿಜಯ ರಜಪೂತ್ ಸೇರಿದಂತೆ ಇತರರು ಇದ್ದರು.
ಶಹಾಪುರ: ಮಹಾತ್ಮ ಗಾಂಧೀಜಿಯವರಿಗೆ ಈ ದೇಶದ ಮಕ್ಕಳಿಗೆ ಹಾಗೂ ಪುರಾತನ ಭಾರತೀಯ ರಾಜ್ಯ ಮತ್ತು ಸತ್ಯವಂತ ನಾಯಕರು ಆಗಿದ್ದ ಸತ್ಯ…
ಕಲಬುರಗಿ: ಶರಣರ ಅನುಬಾವಗಳಿಂದ ಹೊರ ಹೊಮ್ಮಿರುವ ವಚನಗಳು ಮಾನವೀಯ ಮೌಲ್ಯ ಹೆಚ್ಚಳಕ್ಕೆ ಪೂರಕವಾಗಿವೆ ಎಂದು ನಿವೃತ್ತ ಪ್ರಾಚಾರ್ಯರಾದ ಪ್ರೊ. ನಿಂಗಮ್ಮ…
ಕಲಬುರಗಿ: ಕರ್ನಾಟಕ ರಾಜ್ಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಯಲಗೊಂಡ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ…
ಕಲಬುರಗಿ: ನಗರದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಿಎಸ್ಎನ್ಎಲ್ 25 ನೇ ಸಂಸ್ಥಾಪನಾ ದಿನಾಚರಣೆಯನ್ನು ಮಕ್ಕಳೊಂದಿಗೆ ಕೆಕ್ ತಿನಿಸುವ ಮೂಲಕ ಸಂಭ್ರಮದಿಂದ…
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ…