ಬಿಸಿ ಬಿಸಿ ಸುದ್ದಿ

ಮಕ್ಕಳು ಸರ್ಕಾರದ ಸೌಲಭ್ಯ ಬಳಸಿಕೊಂಡು ಜ್ಞಾನಿಗಳಾಗಲಿ: ಗಿರೀಶ ಕಂಬಾನೂರ

ಶಹಾಬಾದ: ಅನುದಾನಿತ ಶಾಲಾ ಮಕ್ಕಳಿಗಾಗಿ ಸರ್ಕಾರವು ಉಚಿತ ಕ್ಷೀರಭಾಗ್ಯ, ಪಠ್ಯಪುಸ್ತಕ, ವಿದ್ಯಾರ್ಥಿವೇತನ ಮುಂತಾದ ಸೌಕರ್ಯಗಳ ನೀಡುತ್ತಿದ್ದು ಅದರ ಸಂಪೂರ್ಣ ಬಳಕೆ ಮಾಡಿಕೊಳ್ಳುವ ಮೂಲಕ ಮಕ್ಕಳು ಜ್ಞಾನಿಗಳಾಗಲಿ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಹೇಳಿದರು.

ಅವರು ನಗರದ ಶಿವಯೋಗೇಶ್ವರ ಸ್ವಾಮಿ ಪ್ರೌಢಶಾಲೆಯ ಮಕ್ಕಳಿಗೆ ಸರ್ಕಾರದಿಂದ ಒದಗಿಸಿದ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರ ಅನೇಕ ಸೌಕರ್ಯಗಳನ್ನು ನೀಡುತ್ತಿದ್ದು ಶಿಕ್ಷಣಕ್ಕಾಗಿ ಪ್ರತಿವ? ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸುತ್ತಿದೆ. ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣವು ಅಗತ್ಯವಾಗಿದ್ದು ವಿದ್ಯಾರ್ಥಿಗಳು ಸರ್ಕಾರದ ಈ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಶಾಲೆಯ ಶಿಕ್ಷಕರು ಸಹ ಅದನ್ನು ಸರಿಯಾಗಿ ಸದ್ಬಳಕೆ ಮಾಡಿ ಕೊಟ್ಟು ಮಕ್ಕಳ ಕಲಿಕೆಗೆ ತಾವು ಸಹಕಾರಿಗಳಾಗಿ. ಶಾಲಾ ಮಕ್ಕಳಿಗೆ ವಿದ್ಯಾವಂತರನ್ನಾಗಿ ಮಾಡಬೇಕೆಂದು ಸರಕಾರದ ಉದ್ದೇಶವಾಗಿದೆ ಇದರ ಸದುಪಯೋಗ ಪಡೆದು ಕೊಳ್ಳುವ ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆದು ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಪ್ರಜೆಗಳಾಗಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ ಮಾತನಾಡಿ, ಶಿಕ್ಷಕರು ಶ್ರಮವಹಿಸಿ ನಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿದರೆ, ಗುರುಗಳೇ ನಮ್ಮ ಪಾಲಿನ ದೇವರು ಎಂಬ ಮಾತಿಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಮುಖ್ಯಗುರು ಶಿವಯೋಗಿ ಕಟ್ಟಿ, ಗಣೇಶ ಜಾಯಿ, ಮಹೇಂದ್ರ ದೊಡ್ಡಮನಿ, ಸುಧಾಬಾಯಿ ಕುಲಕರ್ಣಿ, ಸುರೇಶ ಕುಲಕರ್ಣಿ ಅನೇಕರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

47 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

50 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

53 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago