ಸುರಪುರ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿನ ಶ್ರೀ ಅಕ್ಕನಾಗಮ್ಮನವರ ಶ್ರೀಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆಯುವ ಜಾತ್ರೆ ಕಾರ್ಯಕ್ರಮದ ಅಂಗವಾಗಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಶಪಥ ಭಜನೆಯನ್ನು ನಡೆಸಲಾಗಿತ್ತು.ಅಲ್ಲದೆ ಶನಿವಾರ ಮುಂಜಾನೆ ಪುರವಂತರ ಮಹಾಸೇವಾ ಕಾರ್ಯಕ್ರಮವನ್ನು ನಡೆಸಲಾಯಿತು.
ಪುರವಂತರ ಮಹಾಸೇವಾ ಕಾರ್ಯಕ್ರಮದ ಸಂದರ್ಭದಲ್ಲಿ ಭಕ್ತಿಯಿಂದ ಪುರವಂತನೊಬ್ಬ ೧೦೮ ಅಡಿ ಉದ್ದನೆಯ ಜನಿವಾರ ಶಸ್ತ್ರವನ್ನು ಚುಚ್ಚಿಕೊಳ್ಳುವ ಮೂಲಕ ಭಕ್ತಿಯನ್ನು ಮೆರೆದರು.ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ಹಾಗು ಸುತ್ತಮುತ್ತಲ ಗ್ರಾಮಗಳ ಜನರು ಭಾಗವಹಿಸಿ ಪುರವಂತರ ಮಹಾಸೇವೆಯನ್ನು ಕಂಡು ರೋಮಾಂಚನಗೊಂಡರು.
ಈ ಸಂದರ್ಭದಲ್ಲಿ ಶ್ರೀಮಠದ ದೇವಿಂದ್ರಪ್ಪ ಮುತ್ಯಾ,ಮುಖಂಡರಾದ ವೆಂಕೋಬ ದೊರೆ,ಶ್ರೀನಿವಾಸ ದೊರೆ,ಹಣಮಂತ್ರಾಯ ಹೊಸ್ಮನಿ,ಮಹಾದೇವಪ್ಪ ಬೊಮ್ಮನಹಳ್ಳಿ,ಬಸವರಾಜ ಮಾಲಿಪಾಟೀಲ್,ಶರಣಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಗ್ರಾಮದ ಅನೇಕ ಜನ ಗಣ್ಯಮಾನ್ಯರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…