ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಸಿಎಂ ಭಾಗವಹಿಸಲು ಲಕ್ಷ್ಮಣ ದಸ್ತಿ ಒತ್ತಾಯ

0
30

ಕಲಬುರಗಿ: ನೂತನ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಕಲಬುರಗಿಗೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಶಾಸಕರಿಗೆ ಕಲ್ಯಾಣ ಕರ್ನಾಟಕ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.

ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಅಧಿಕಾರ ವಹಿಸಿಕೊಂಡ ನಂತರ ಕಲ್ಯಾಣ ಕರ್ನಾಟಕಕ್ಕೆ ಇನ್ನೂ ಭೇಟಿ ನೀಡಿಲ್ಲ. ಬರುವ 17ನೇ ಸೆಪ್ಟೆಂಬರ ರಾಷ್ಟ್ರೀಯ ದಿನಾಚರಣೆಯ ಶುಭ ದಿನದಂದು ಕಲಬುರಗಿಗೆ ಆಗಮಿಸಿ ಕಲ್ಯಾಣ ಕರ್ನಾಟಕ ಪ್ರದೇಶದ ಕಲ್ಯಾಣದ ಬಗ್ಗೆ ಸ್ಪಂದಿಸುವರೆಂಬ ನಿರೀಕ್ಷೆ ಇಲ್ಲಿನ ಜನರು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಸಮಿತಿ ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಬರೆದಿದ್ದು, ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿಯವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದಸ್ತಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here