ಮಹಿಳೆಗೆ ವಿವಸ್ತ್ರಗೊಳಿಸಿ ಥಳಿತ: ಶಾಸಕ ಪ್ರಿಯಾಂಕ್ ಖರ್ಗೆ ಖಂಡನೆ

0
21

ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುಪದಗಳಿಂದ ಖಂಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆ ಹಾಗೂ ಕಠೋರತೆಯ ಸಂದೇಶವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.

Contact Your\'s Advertisement; 9902492681

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here