ಸುರಪುರ ಹುಣಸಗಿ ತಾಲೂಕಿನ ರೈತರಿಗೆ ಬಡ್ಡಿರಹಿತ ಸಾಲ: ಸುರೇಶ ಸಜ್ಜನ್

ಸುರಪುರ: ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಯೋಗದಲ್ಲಿ 2020-21ನೇ ಸಾಲೀನಲ್ಲಿ ಇದೇ 18,19 ರಂದು ಎರಡು ದಿನ ಸಹಕಾರಿ ರೈತರಿಗೆ ಸುಮಾರು 17 ಕೋಟಿ.ರೂ.ಬಡ್ಡಿ ರಹಿತ ಅಧ್ಯಕ್ಷ ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ.ಸುರೇಶ ಸಜ್ಜನ ತಿಳಿಸಿದರು.

ಸುರಪುರದ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿ,18 ರಂದು ಬೆಳಿಗ್ಗೆ 10-30 ಕ್ಕೆ ಮುದನೂರಿನ ದೇವರ ದಾಸೀಮಯ್ಯ ದೇವಸ್ಥಾನದ ಆವರಣದಲ್ಲಿ ಶಾಸಕ ರಾಜೂಗೌಡ ಅವರು ಉದ್ಘಾಟಿಸಿವರು ಹಾಗೂ ಸೇಡಂ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಜ್ಯೋತಿ ಬೆಳಗಿಸುವರು ಕೋರಿ ಸಿದ್ದೇಶ್ವರ ಶಾಖಾ ಮಠ ಹಾಗೂ ಕಂಠಿಮಠದ ಪೂಜ್ಯ ಶ್ರೀ ಸಿದ್ಧ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹಾಗೂ ರಸ್ತಾಪುರ ಬ್ರಹನಮಠದ ಷ.ಬ್ರ.ಪೂಜ್ಯಶ್ರೀ ಗಿರಿದರಾಧ್ಯ ಪಂಡಿತಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ್ ಸಜ್ಜನ ಅಧ್ಯಕ್ಷತೆ ವಹಿಸುವರು.ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಶಿವಾನಂದ ಮಾನಕರ ಅವರು 1904 ದಲ್ಲಿ ಕೃಷಿ ಸಹಕಾರಿ ಸಂಸ್ಥಾಪಕರಾದ ಸಿದ್ದನಗೌಡ ಪಾಟೀಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.ಮುಖ್ಯ ಅತಿಥಿ ಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾದ ಶಹಾಪೂರ ದ ಗುರುನಾಥ ರೆಡ್ಡಿ ಪಾಟೀಲ್, ಯಾದಗಿರಿಯ ಸಿದ್ರಾಮ ರೆಡ್ಡಿ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿದಾನಂದ ನಿಂಬಾಳ ಅವರು ಉಪಸ್ಥಿತರಿವರು. ಮಧ್ಯಾಹ್ನ 2-30 ಕ್ಕೆ ರಂಗಂಪೇಟಿಯ ವೀರಶೈವ ಕಲ್ಯಾಣ ಮಂಟಪದಲ್ಲಿ 7 ಕೃಷಿ ಸಹಕಾರ ಸಂಘ ಗಳಿಗೆ ಸಾಲ ವಿತರಿಸಲಾಗುವುದು.ದೇವಾಪುರದ ಜಡೀ ಶಾಂತಲಿಂಗಶ್ವೇರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯರು, ಸುರಪುರ ದ ಕಡ್ಲಪ್ಪ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮೀಗಳು ಸಾನಿಧ್ಯ ವಹಿಸುವರು.

19 ರಂದು ಬೆಳಿಗ್ಗೆ 10-30 ಕ್ಕೆ ಕೊಡೇಕಲ್ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಂತರ ಮಧ್ಯಾಹ್ನ 2-30 ಕ್ಕೆ ದೇವತ್ಕಲ್ ನಲ್ಲಿ 5 ಗಂಟೆಗೆ ಹುಣಸಗಿಯಲ್ಲಿ ಸಾಲ ವಿತರಣೆ ಕಾರ್ಯಕ್ರಮ ನಡೆಯಲಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು,ನಿರ್ದೇಶಕರು, ಕಾರ್ಯದರ್ಶಿಗಳು,ಸಹಕಾರಿ ಸಂಘ,ರೈತರು ಭಾಗವಹಿಸಿವರು ಎಂದರು.

ಸುದ್ದಿ ಗೋಷ್ಠಿ ಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪು ಗೌಡ ಪಾಟೀಲ್ ,ಮುದನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಾಂತಿ ರೆಡ್ಡಿ ಚೌದ್ರಿ ಹಾಗೂ ಸಂಘದ ವ್ಯವಸ್ಥಾಪಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420