ಶಹಾಬಾದ: ಮುಂಬರುವ ತಾಪಂ,ಜಿಪಂ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ಎಲ್ಲಾ ಕಾರ್ಯಕರ್ತರ ಮುಖಂಡರ ಗುರಿಯಾಗಬೇಕೆಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹೇಳಿದರು.
ಅವರು ಸೋಮವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಶಹಾಬಾದನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ.ಯಾವಾಗಲೂ ಪಕ್ಷಕ್ಕೆ ಹೆಚ್ಚಿನ ಲೀಡ್ ನೀಡಿರುವ ಪ್ರದೇಶ.ಇಲ್ಲಿನ ಕಾರ್ಯಕರ್ತರು ಕ್ರೀಯಾಶೀಲರಾಗಿದ್ದಾರೆ.ಅಲ್ಲದೇ ನಗರಸಭೆಯ ೨೭ ಸದಸ್ಯರಲ್ಲಿ ೨೨ ಜನ ಸದಸ್ಯರು ಕಾಂಗ್ರೆಸ್ ಪಕ್ಷದಿಂದಲೇ ಗೆಲುವು ಸಾಧಿಸಿ ನಗರಸಭೆಯ ಚುಕ್ಕಾಣಿಯನ್ನು ಪಡೆದುಕೊಂಡಿದೆ.
ಮೊದಲಿನಿಂದಲೂ ಇಲ್ಲಿ ಹೆಚ್ಚಿನ ಮತವನ್ನು ಪಕ್ಷ ಪಡೆದುಕೊಂಡು ಬಂದಿದೆ. ಮುಂಬರುವ ತಾಪಂ,ಜಿಪಂ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಅಭ್ಯರ್ಥಿಯಾಗಲಿ, ನಿಮ್ಮ ನಿಮ್ಮ ನಗರಸಭೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾವ ರೀತಿ ತಂತ್ರ ಅನುಸರಿಸಿದಿರೋ ಅದೇ ರೀತಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮದು ಎಂದು ಹೇಳಿದರು.
ಶಹಾಬಾದ ಬ್ಲಾಕ್ ಕೆಪಿಸಿಸಿ ಉಸ್ತುವಾರಿ ರಾಜಾಮೈನೋದ್ದಿನ್ ಜಮಾದಾರ ಮಾತನಾಡಿ, ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಬೇಕು. ಪಕ್ಷವನ್ನು ಸಂಘಟನೆ ಮಾಡಲು ಅನೇಕ ರೂರೇಷೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಪಕ್ಷದ ಸಂಘಟನೆ ಮಾಡುವ ಮೂಲಕ ೨೦೨೩ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ಬರಲು ಪ್ರಯತ್ನಿಸಬೇಕೆಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಎಪಿಎಮ್ಸಿ ಸದಸ್ಯ ವಿಶ್ವರಾಧ್ಯ ಬೀರಾಳ ವೇದಿಕೆಯ ಮೇಲಿದ್ದರು.
ಮೃತ್ಯುಂಜಯ್ ಹಿರೇಮಠ, ಇನಾಯತಖಾನ ಜಮಾದಾರ,ಡಾ.ಅಹ್ಮದ್ ಪಟೇಲ್, ಮಹ್ಮದ್ ಬಾಕ್ರೋದ್ದಿನ್, ರಾಜೇಶ ಯನಗುಂಟಿಕರ್,ಕಿರಣಬಾಬು ಕೋರೆ,ಮೆಹಬೂಬ,ಶ್ರವಣಕುಮಾರ, ಶರಣು ಪಗಲಾಪೂರ,ಸೂರ್ಯಕಾಂತ ಕೋಬಾಳ,ನಾಗೇಂದ್ರ ನಾಟೀಕಾರ,ಮ.ಇಮ್ರಾನ್, ಮುನ್ನಾ ಪಟೇಲ್,ರಾಜು ಮೇಸ್ತ್ರಿ, ಅವಿನಾಶ ಕಂಬಾನೂರ, ನಾಗರಾಜ ಕರಣಿಕ, ಶಿವಕುಮಾರ ನಾಟೀಕಾರ, ರಾಕೇಶ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…