ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ 12 ಲಕ್ಷಕ್ಕೂ ಅಧಿಕ ಲಸಿಕಾಕರಣ ಗುರಿ ಸಾಧನೆ: ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ಸಾಂಕ್ರಾಮಿಕ ಕೋವಿಡ್-19 ವೈರಸ್ ವಿರುದ್ಧ ಹೋರಾಡಲು ಜಿಲ್ಲೆಯ ಒಟ್ಟು 455 ಲಸಿಕಾ ಕೇಂದ್ರಗಳಲ್ಲಿ ಜನೆವರಿ 2021, 16ರಿಂದ ಈವರೆಗೆ 18 ವರ್ಷ ಮೇಲ್ಪಟ್ಟವರಿಗೆ ಒಟ್ಟು 18,87,598 ಜನರಿಗೆ ಕೋವಿಡ್ ಲಸಿಕೆ ಹಾಗುವ ಗುರಿಹೊಂದಲಾಗಿದ್ದು, ಆ ಪೈಕಿ 9,93,383 ಜನರಿಗೆ ಮೊದಲನೇ ಡೋಸ್ ಹಾಗೂ 2,93,410 ಜನರಿಗೆ ಸೇರಿ ಒಟ್ಟು 12,86,793 ಜನರಿಗೆ ಕೋವಿಡ್ ಲಸಿಕೆ ನೀಡಿ ಗುರಿಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದರು.

ಜಿಲ್ಲೆಯ ಒಟ್ಟು ಲಸಿಕಾಕರಣದ ಪೈಕಿ ಆರೋಗ್ಯ ಕಾರ್ಯಕರ್ತರಲ್ಲಿ 23581 ಜನರಿಗೆ ಮೊದಲ ಡೋಸ್ ಲಸಿಕೆ ನೀಡಿದರೆ, ಇನ್ನು 22576 ಜನರಿಗೆ ಎರಡನೇ ಡೋಸ್ ಲಸಿಕೆ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಮುಂಚೂಣಿ ಕಾರ್ಯಕರ್ತರಲ್ಲಿ 25722 ಮೊದಲ ಡೋಸ್ ಹಾಗೂ 17968 ಜನರಿಗೆ ಎರಡನೇ ಡೋಸ್ ಲಸಿಕೆ ಹಾಕಲಾಗಿದೆ. ಇದಲ್ಲದೇ 894215 ಇನ್ನು ಲಸಿಕೆ ಪಡೆಯದೇ ಇರುವ ಫಲಾನುಭವಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.

ಕಲಬುರಗಿ ನಗರ ಪ್ರದೇಶದಲ್ಲಿ ಒಟ್ಟು 46923 ಜನರಿಗೆ ಲಸಿಕೆ ಹಾಕಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಒಟ್ಟಾರೆ 817562 ಜನರು ಲಸಿಕೆಪಡೆದಿದ್ದಾರೆ. ಜಿಲ್ಲೆಯ ಗಡಿಭಾಗದ ಒಟ್ಟು 72 ಹಳ್ಳಿಗಳ ಪೈಕಿ 18 ವರ್ಷ ಮೇಲ್ಪಟ್ಟ 95850 ಜನರಿಗೆ ಹಾಗೂ ಗಡಿಭಾಗದ ಒಟ್ಟು ಹಳ್ಳಿಗಳಲ್ಲಿ 77,738 ಜನರಿಗೆ ಹಾಕಲಾಗಿರುವ ಲಸಿಕಾ ಪ್ರಮಾಣ ಶೆ.87%ರಷ್ಟಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಜಿಲ್ಲೆಯ ವಿವಿಧೆಡೆ ಸಂಚಾರಿ ಲಸಿಕಾ ವಾಹನಗಳ ಮೂಲಕ ತೆರಳಿ 13033 ಜನರಿಗೆ ಲಸಿಕೆ ನೀಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಹೊಸದಾಗಿ 1,20,00,000 ಡೋಸ್ ಲಸಿಕಾ ಸಾಮಥ್ರ್ಯವುಳ್ಳ ಪ್ರಾದೇಶಿಕ ಹಾಗೂ ಜಿಲ್ಲಾ ಲಸಿಕಾ ಉಗ್ರಾಣ ಕಟ್ಟಡ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

26 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago