ಸುರಪುರ: ನಗರದ ಖುರೇಶಿ ಮೊಹಲ್ಲಾದ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ಮತ್ತು ಕ್ರೀಡಾ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಜೀಂ ಪ್ರೇಮಜಿ ಫೌಂಡೇಶನ್ನಿನ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡಿ,ಸರಕಾರ ಮಕ್ಕಳ ಕಲಿಕೆಗಾಗಿ ಅನೇಕ ಯೋಜನೆಗಳನ್ನು ತಂದಿದೆ.ಸಮವಸ್ತ್ರ,ಉಚಿತ ಪುಸ್ತಕಗಳು, ಮದ್ಹ್ಯಾನದ ಬಿಸಿಯೂಟ,ಹಾಲು ಹೀಗೆ ಅನೇಕ ಯೋಜನೆಗಳಿವೆ ಇವುಗಳ ಸದುಪಯೋಗ ಪಡೆದು ಉತ್ತಮ ಶಿಕ್ಷಣ ಪಡೆಯಬೇಕಿದೆ. ಅಲ್ಲದೆ ಸ್ಥಳಿಯ ಜನಪ್ರತಿನಿಧಿಗಳು ಮತ್ತು ನಾಗರಿಕರು ಶಾಲೆಗಳ ಅಭೀವೃಧ್ಧಿಗೆ ಕಾಳಜಿ ತೋರಿದಲ್ಲಿ ಹೆಚ್ಚಿನ ಕಲಿಕೆಗೆ ಸಾಧ್ಯವಾಗಲಿದೆ,ಇದರಿಂದ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದರು.
ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರಗಳ ಕೊಡುಗೆ ನೀಡಿದ ಹೋರಾಟಗಾರ ನಾಗರಾಜ ಕಲಬುರ್ಗಿ ಮಾತನಾಡಿ,ತಂದೆ ತಾಯಿಯರು ತಮ್ಮ ಮಕ್ಕಳು ಅಕ್ಷರ ಕಲಿತು ಮುಂದೆ ದೊಡ್ಡ ವ್ಯಕ್ತಿಗಳಾಗಲೆಂಬ ಆಸೆಯಿಂದ ಶಾಲೆಗೆ ಕಳುಹಿಸುತ್ತಾರೆ.ಅವರ ಆಸೆಯನ್ನು ಈಡೇರಿಸುವ ಛಲ ಎಲ್ಲರಲ್ಲಿ ಬರಲಿ,ಅಲ್ಲದೆ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರುವಂತೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರುಗಳಾದ ಸ್ಯಾಮುವೆಲ್ ವಹಿಸಿಕೊಂಡಿದ್ದರು.ಅತಿಥಿಗಳಾಗಿ ಶಕೀಲ್ ಅಹ್ಮದ,ಹನೀಫ್,ಅಂಬ್ಲಪ್ಪ,ರಾಧಾ,ತಿಪ್ಪಣ್ಣ ವೇದಿಕೆ ಮೇಲಿದ್ದರು.ಶಿಕ್ಷಕರಾದ ಶಬಿಹಾಬಾನು,ಮಮತಾ ಸೇರಿದಂತೆ ಅನೇಕ ಭಾಗವಹಿಸಿದ್ದರು.ರವಿ ಗಲಗಿನ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…