ಬಿಸಿ ಬಿಸಿ ಸುದ್ದಿ

ಜನರಿಗೆ ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ: ಗುರಲಿಂಗಪ್ಪ

ಶಹಾಬಾದ: ನಗರಸಭೆಯ ಎಲ್ಲಾ ಸರ್ವ ಸದಸ್ಯರು ತಮ್ಮ ತಮ್ಮ ವಾರ್ಡಗಳಲ್ಲಿನ ಜನರಿಗೆ ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ಲಸಿಕೆ ತೆಗೆದುಕೊಳ್ಳುವಂತೆ ಮಾಡುವುದು ನಿಮ್ಮ ಕರ್ತವ್ಯ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ಶುಕ್ರವಾರ ಕೋವಿಡ್ ಲಸಿಕಾ ಅಭಿಯಾನದ ನಿಮಿತ್ತ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಬಹುತೇಖ ಜನರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆ.ಆದರೆ ಕೆಲವು ಜನರು ಅಸಡ್ಡೆ, ನಿರಾಸಕ್ತಿ ತೋರುತ್ತಿರುವುದು ಕಂಡು ಬರುತ್ತಿದೆ. ಕೋವಿಡ್ ಮೂರನೇ ಅಲೆ ಬರುವ ಮುನ್ನವೇ ನಗರದಲ್ಲಿ ಎಲ್ಲರೂ ಲಸಿಕೆ ಪಡೆದರೆ, ಕೋವಿಡ್ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಉಂಟಾಗುತ್ತದೆ.ಆದ್ದರಿಂದ ತಮ್ಮ ತಮ್ಮ ವಾರ್ಡಗಳಲ್ಲಿ ಲಸಿಕೆ ತೆಗೆದುಕೊಳ್ಳದ ಜನರನ್ನು ಗುರುತಿಸಿ, ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ತೆಗೆದುಕೊಳ್ಳುವಂತೆ ಮಾಡುವುದು ಮತ್ತು ಕೋವಿಡ್ ಮುಕ್ತ ವಾರ್ಡ ಆಗಿ ಮಾಡುವುದು ನಿಮ್ಮ ಕರ್ತವ್ಯ.ಈಗಾಗಲೇ ನಗರ ಪ್ರದೇಶಕ್ಕೆ ೪೩೦೦ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ೫೩೦೦ ಸೇರಿದಂತೆ ಒಟ್ಟು ೧೦೦೦೦ ಲಸಿಕೆಯ ಗುರಿಯನ್ನು ನೀಡಲಾಗಿದೆ. ನಗರದ ಪ್ರದೇಶದಲ್ಲಿ ೧೮ ಕೇಂದ್ರಗಳನ್ನು ತೆರೆಯಲಾಗಿದೆ.ಅದನ್ನು ಯಶಸ್ವಿಯಾಗಿ ಮಾಡಲು ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.

ಡಾ.ಶಂಕರ ರಾಠೋಡ ಮಾತನಾಡಿ, ನಗರಸಭೆಯ ಸದಸ್ಯರು ತಾವು ಲಸಿಕೆ ಪಡೆದುಕೊಂಡಿರದಿದ್ದರೇ ಶುಕ್ರವಾರ ಕೋವಿಡ್ ಲಸಿಕಾ ಅಭಿಯಾನದಲ್ಲಿ ತಾವು ಲಸಿಕೆ ಪಡೆದುಕೊಳ್ಳಬೇಕು.ಸರ್ಕಾರ ಸಾರ್ವಜನಿಕರಿಗೋಸ್ಕರ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು ಇದರ ಸದುಪಯೋಗವಾಗುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು.ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿ. ಅಲ್ಲದೇ ಸಮುದಾಯದಲ್ಲಿ ಕೋವಿಡ್ ಹರಡದಂತೆ ಮಾಡಲು ಕೋವಿಡ್ ಲಸಿಕೆ ಪಡೆಯುವುದು ಅಗತ್ಯವಿದೆ ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾ ಬೇಗಂ, ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ, ಪರಿಸರ ಅಭಿಯಂತರ ಮುಜಾಮಿಲ್ ಅಲಂ, ಎಇ ಶಾಂತರೆಡ್ಡಿ ದಂಡಗುಲಕರ್, ವ್ಯವಸ್ಥಾಪಕ ಶರಣಗೌಡ ಪಾಟೀಲ, ಕಂದಾಯ ಅಧಿಕಾರಿ ಸುನೀಲಕುಮಾರ ವೀರಶೆಟ್ಟಿ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ,ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ, ರಾಜೇಶ, ಶರಣು ಸೇರಿದಂತೆ ಸರ್ವ ಸದಸ್ಯರು ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago