ಬಿಸಿ ಬಿಸಿ ಸುದ್ದಿ

ಬಿದ್ದ ಚರಂಡಿ ಸ್ಥಳದಲ್ಲೇ ಧರಣಿ: ಬಿಜೆಪಿ ಎಚ್ಚರಿಕೆ

ವಾಡಿ: ಪಟ್ಟಣದ ಮುಖ್ಯ ರಸ್ತೆ ಬದಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಕೋಟಿ ರೂಪಾಯಿ ವೆಚ್ಚದ ಮುಖ್ಯ ಚರಂಡಿ ಗೋಡೆ ಬಿದ್ದು ಎಂಟು ವರ್ಷ ಕಳೆದಿದೆ. ದುರಸ್ಥಿ ಮಾಡುವಲ್ಲಿ ಪುರಸಭೆ ಆಡಳಿತ ಸುದೀರ್ಘ ನಿರ್ಲಕ್ಷ್ಯ ತೋರಿದೆ. ಹತ್ತು ದಿನದಲ್ಲಿ ಬಿದ್ದ ಚರಂಡಿ ಎತ್ತದಿದ್ದರೆ ಅದೇ ಸ್ಥಳದಲ್ಲಿ ಧರಣಿ ಕುಳಿತು ರಸ್ತೆ ತಡೆ ನಡೆಸುವುದಾಗಿ ಪುರಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಭೀಮಶಾ ಜಿರೊಳ್ಳಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮುಖ್ಯಾಧಿಕಾರಿ ಡಾ.ಚಿದಾನಂದಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿರುವ ಭೀಮಶಾ, ಪುರಸಭೆಯ ಕಾಂಗ್ರೆಸ್ ಆಡಳಿತದ ಧಿವ್ಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆ ವ್ಯಾಪ್ತಿಯ ವಾರ್ಡ್-೧೩ರ ಮುಖ್ಯ ರಸ್ತೆಬದಿಯ ಮೆಥೋಡಿಸ್ಟ್ ಚರ್ಚ್ ಮಾರ್ಗದಲ್ಲಿ ದೊಡ್ಡ ಚರಂಡಿ ಗೋಡೆ ಬಿದ್ದಿದೆ. ಮಕ್ಕಳು, ವೃದ್ದರು ನಡೆದಾಡಲು ಕಷ್ಟವಾಗುತ್ತಿದೆ. ಗಬ್ಬು ವಾಸನೆಯಿಂದ ಜನರು ಬೇಸತ್ತಿದ್ದಾರೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಪಯಕಾರಿ ಚರಂಡಿಯನ್ನು ಕೂಡಲೇ ದುರಸ್ಥಿಗೊಳಿಸಬೇಕು. ಶ್ರೀನಿವಾಸಗುಡಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ವಿಪರೀತ ಹದಗೆಟ್ಟಿರುವ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ರಿಪೇರಿ ಕಾಣದೆ ಕಳೆದ ಐದಾರು ವರ್ಷಗಳಿಂದ ಕೆಟ್ಟುನಿಂತಿರುವ ವಿವಿಧ ವೃತ್ತಗಳ ಹೈಮಾಸ್ಟ್ ದೀಪಗಳನ್ನು ಪುನಹ ಬೆಳಕು ನೀಡುವಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಗರದ ಮುಖ್ಯ ರಸ್ತೆಗಳು ಹದಗೆಟ್ಟು ಗುಂಡಿಗಳು ಬಿದ್ದರೂ ಯಾರೂ ಕೇಳದಂತಾಗಿದೆ. ಸಿಮೆಂಟ್ ರಸ್ತೆಗಳು ಬಿರುಕು ಬಿಟ್ಟು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರೂ ಸಂಬಂದಿಸಿದ ಅಧಿಕಾರಿಗಳು ಮೌನವಾಗಿದ್ದಾರೆ. ಹೈಮಾಸ್ಟ್ ದೀಪಗಳು ಕೆಟ್ಟು ವೃತ್ತಗಳು ಕಗ್ಗತ್ತಲ ಕೂಪವಾಗಿದ್ದರೂ ಜನರ ಗೋಳಾಟ ಪುರಸಭೆ ಆಡಳಿತಕ್ಕೆ ಅರಿವಿಲ್ಲ. ಜನರು ನಾನಾ ಸಮಸ್ಯೆಗಳಿಂದ ಕಷ್ಟಕ್ಕೀಡಾಗುತ್ತಿರುವುದನ್ನು ಕಾಂಗ್ರೆಸ್ ಸದಸ್ಯರು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ. ಹತ್ತು ದಿನಗಳ ಒಳಗಾಗಿ ಬೇಡಿಕೆಗಳು ಈಡೇರದಿದ್ದರೆ ಸೆ.೨೩ ರಂದು ಬಿದ್ದ ಚರಂಡಿಯ ಜಾಗದಲ್ಲಿ ರಸ್ತೆ ತಡೆದು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago