ಕಲಬುರಗಿ: ಇಂದು, ಬೆಳ್ಳೆಗ್ಗೆ 8.45 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಹಳೆ ಬ್ರಹ್ಮಪೂರ್ ಬಡಾವಣೆಯ ಚಂದ್ರಶೇಖರ್ ಅಜಾದ್ ಚೌಕನಲ್ಲಿ, 73 ನೇ ವಿಮೋಚನಾ ದಿನಾಚರಣೆ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಕವಿರಾಜ್ ಕೋರಿ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ನಾವು ಸರ್ಕಾರದ ಆದೇಶ ಮೇರೆಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆದರೆ ನಮ್ಮ ಸಂಘದ ಗೌರವ ಅಧ್ಯಕ್ಷರು ಹಾಗೂ ನ್ಯಾಯವಾದಿ ಹೋರಾಟಗಾರ ಜೇನವೆರಿ ವಿನೋದ ಕುಮಾರ ರವರು ತಮ್ಮ ಹಟ ಬಿಡದೆ ಕಳೆದ 7 ವರ್ಷಗಳಿಂದ ಸೆಪ್ಟೆಂಬರ್18 ರಂದು ಆಚರಿಸುತ್ತಾರೆ. ನಮ್ಮ ಕ.ಕ ನೈಜ ಸ್ವಾತಂತ್ರ್ಯವನ್ನು ಆಚರಿಸಬೇಕು ಎನ್ನುವ ಮನವಿ ಸರ್ಕಾರ ಪರಿಗಣಿಸಿ ಆ ಭಾಗಕ್ಕೆ ನ್ಯಾಯ ಒದಗಿಸಲು ನಾವೆಲ್ಲರೂ ಒಂದು ಗೂಡಿ ಧ್ವನಿ ಮುಟ್ಟಿಸಬೇಕಾಗಿದೆ ಎಂದು ಕೋರಿದರು.
ಮೊದಲಿಗೆ, ಸರದಾರ ವಲ್ಲಭಭಾಯಿ ಪಟೇಲ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಚಿಕ್ಕ ಮಕ್ಕಳ ಕೈಯಿಂದ ಧ್ವಜಾರೋಹಣ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಬಡಾವಣೆಯ ತಿಪ್ಪಣ್ಣ ಬಾಲಿಕಾಯಿ, ಬಾಬು ಪಡಶೆಟ್ಟಿ, ಬಸವರಾಜ ಗೌಡ ಚಿತ್ತಾಪುರ, ತಾರಾ ಸಿಂಗ್, ಫೋಟೋ ಶರಣಯ್ಯ ಸ್ವಾಮಿ, ಅಮೃತ, ಟೈಲರ್ ಅಂಬರೀಷ್ ಜಮದಾರ ಹಾಗೂ ದತ್ತಾತ್ರೇಯ ರೆಡ್ಡಿ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…