ಸುರಪುರ: ತಾಲ್ಲೂಕಿನ ಭೈರಿಮರಡಿ ಗ್ರಾಮ ಸರಕಾರಿ ಶಾಲೆಯ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ತಾಲ್ಲೂಕಾಧ್ಯಕ್ಷ ರವಿ ನಾಯಕ ಮಾತನಾಡಿ,ಬೈರಿಮರಡಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯದಲ್ಲಿರುವ ದೀಪಾಶ್ರಿಯವರು ಶಾಲೆಗೆ ಸರಿಯಾಗಿ ಬರುವುದಿಲ್ಲ,ಕೆಲವೊಮ್ಮೆ ಶಾಲೆಗೆ ಬಂದರೂ ಮಕ್ಕಳಿಗೆ ಸರಿಯಾಗಿ ಪಾಠ ಮಾಡದೆ ಸಮಯ ವ್ಯರ್ಥ ಕಳೆಯುವ ಮೂಲಕ ಕರ್ತವ್ಯ ಲೋಪ ಎಸಗುತ್ತಾರೆ.ಇದನ್ನ ಕುರಿತು ಜನತೆ ಶಿಕ್ಷಕಿಗೆ ಕೇಳಿದರೆ ಮಕ್ಕಳ ಪಾಲಕರಿಗೂ ಅಗೌರವವಾಗಿ ಮಾತನಾಡಿ ಕಳುಹಿಸುತ್ತಾರೆ.
ಈ ಹಿಂದೆಯು ಕೂಡ ಈ ಶಿಕ್ಷಕಿಯ ಮೇಲೆ ವಿವಿಧ ಆರೋಪಗಳ ದೂರುಗಳಿದ್ದು ಹಿಂದೆ ಇದ್ದ ಬಿಇಒ ಅವರು ಕ್ರಮ ಕೈಗೊಂಡಿಲ್ಲ,ಆದ್ದರಿಂದ ದೀಪಾಶ್ರಿಯವರು ತಮ್ಮ ಕರ್ತವ್ಯದೆಡೆಗಿನ ನಿರ್ಲಕ್ಷ್ಯ ಮುಂದುವರೆಸಿದ್ದಾರೆ.ಆದ್ದರಿಂದ ಈ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿ,ಬೇರೆ ಶಿಕ್ಷಕರನ್ನು ನಿಯೋಜಿಸಬೇಕು.ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರ ವೆಂಕಟೇಶ ನಾಯಕ,ಶ್ರೀನಿವಾಸ ನಾಯಕ,ಮಲ್ಲು ಕಬಾಡಗೇರಾ,ಶರಣಪ್ಪ ,ಹಣಮಂತ್ರಾಯ ಮೇಟಿಗೌಡ,ಸೋಮು ಸುರಪುರ,ಮಲ್ಲು ಯಾದವ,ರವಿ ಹೊಸ ಸಿದ್ದಾಪುರ,ಅಶೋಕ ಬೈರಿಮರಡಿ,ಬಲಭೀಮ ಬೊಮ್ಮನಹಳ್ಳಿ ಹಾಗು ಪೋಷಕರಾದ ಸಿದ್ರಾಮಪ್ಪ,ದ್ಯಾವಪ್ಪ,ಮಲ್ಲಪ್ಪ ಧನರಾಜ,ಮಲ್ಲು ಬನ್ನೆಟ್ಟಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…