ತರಾತುರಿಯಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಬೇಡ: ಸಿಎಂಗೆ ನೀಲಾ ಮನವಿ

0
106

ಕಲಬುರಗಿ: ತರಾತುರಿಯಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆಯ ನೀಲಾ ಕೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಲ್ಲಿನ ಕವಾಯತು ಮೈದಾನದಲ್ಲಿ ಭೇಟಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಲಿತ ಹಕ್ಕುಗಳ ಸಮಿತಿಯ ಸಂಚಾಲಕರಾದ ಕಾ.ಸುಧಾಮ ಧನ್ನಿ, ಸಹಸಂಚಾಲಕ ಕಾ.ಪಾಂಡುರಂಗ ಮಾವಿನಕರ್, ಕೃಷಿ ಕೂಲಿಕಾರ್ಮಿಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕಾ.ಭೀಮಶೆಟ್ಟಿ ಯಂಪಳ್ಳಿ, ಪ್ರಾಂತ ರೈತ ಸಂಘಟನೆಯ ಅಧ್ಯಕ್ಷ ಕಾ.ಶರಣಬಸಪ್ಪ ಮಮಶೆಟ್ಟಿ, ಸಿಐಟಿಯುನ ಮುಖಂಡರಾದ ಕಾ.ನಾಗಯ್ಯ ಸ್ವಾಮಿ ನಿಯೋಗದಲ್ಲಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here