ಸಿದ್ಧಗಂಗಾ ಹಳೆಯ ವಿದ್ಯಾರ್ಥಿ ಹಿತೈಷಿಗಳಿಂದ ಸಿಎಂಗೆ ಸನ್ಮಾನ

0
19

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ಧಗಂಗಾಶ್ರೀಗಳ ಲಿಂಗೈಕ್ಯ ದಿನವನ್ನು ದಾಸೋಹ ದಿನವನ್ನಾಗಿ ಅಧಿಕೃತ ಆದೇಶ ಹೊರಡಿಸಿರುವದಕ್ಕೆ ಶ್ರೀಗಳ ಜೀವನ ಚರಿತ್ರೆ ಒಳಗೊಂಡ  ಚಿತ್ರ ಜಂಗಮ ಸಂಪುಟವನ್ನು ಕಲಬುರಗಿಯ ಅತಿಥಿ ಗೃಹದಲ್ಲಿ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ, ಕಲಬುರಗಿ ಘಟಕದಿಂದ ಅಭಿನಂದಿಸಿ ಗೌರವಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ಸೇಡಂ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ ಅವಂಟಿ ಅವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here